Categories: ಕೊಡಗು

ರೆಸಾರ್ಟ್‌ ಮಾಲೀಕರಿಂದ ಹಲ್ಲೆ: ಇ-ಮೇಲ್‌ ಮೂಲಕ ದೂರು ನೀಡಿದ ಪ್ರವಾಸಿಗ

ಮಡಿಕೇರಿ: ಜಿಲ್ಲೆಯ ನಾಪೋಕ್ಲು ರೆಸಾರ್ಟ್ ನಲ್ಲಿ ಪ್ರವಾಸಿಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಇ-ಮೇಲ್‌ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ.

ಬೆಂಗಳೂರು ಮೂಲದ ವಿನಯ್‌ ಜೈನ್‌ ಎಂಬುವವರೆ ಹಲ್ಲೆಗೆ ಒಳಗಾಗಿ, ದೂರು ನೀಡಿರುವುದು. ನಾಪೋಕ್ಲುವಿನ ಸ್ಕೈ ಲಾರ್ಕ್‌ ರೆಸಾರ್ಟ್‌ ಮಾಲೀಕ ಮನು ಮುತ್ತಪ್ಪ ಹಲ್ಲೆ ನಡೆಸಿದವರು. ಘಟನೆ ನಡೆದು 25 ದಿನಗಳ ನಂತರ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದಾರೆ.

ಘಟನೆ ಹಿನ್ನಲೆ:
ನಾಪೋಕ್ಲುವಿನ ಸ್ಕೈ ಲಾರ್ಕ್ ರೆಸಾರ್ಟ್ ನಲ್ಲಿ ಕುಟುಂಬ ಸದಸ್ಯರೆಲ್ಲರು ತಂಗಿದ್ದಾಗ ನವಂಬರ್ 2 ರಂದು ನಮ್ಮ ಮೇಲೆ ರೆಸಾರ್ಟಿನ ಮಾಲೀಕರು ಹಾಗೂ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ಮೂವರು ದಂಪತಿಗಳು ಮತ್ತು ಐವರು ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವಿನಯ್‌ ಜೈನ್ ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಸಂಬಂಧ ವೀಡಿಯೋ ಚಿತ್ರಣ ಸಹಿತ ದೂರುನ್ನು ಇ.ಮೇಲ್ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಪ್ರಕರಣವನ್ನು ಕೈಗೆತ್ತಿಕೊಂಡು ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

2 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

2 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

3 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

3 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

6 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

6 hours ago