ಮಡಿಕೇರಿ : ಜನರ ದಿಕ್ಕು ತಪ್ಪಿಸಲು ಆರ್ಎಸ್ಎಸ್ ವಿರುದ್ಧ ಸರ್ಕಾರದಿಂದ ಗದಪ್ರಹಾರ ನಡೆಯುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘವು ನೂರು ವರ್ಷಗಳಿಂದ ಸಮಾಜಸೇವೆ ಮಾಡಿಕೊಂಡು ಬರುತ್ತಿದ್ದು, ನೂರು ವರ್ಷದ ಆಚರಣೆಯನ್ನು ಎಲ್ಲೆಡೆ ಮಾಡಲಾಗುತ್ತಿದೆ. ಆದರೆ, ಸರ್ಕಾರ ತನ್ನ ವಫಲ್ಯ ಮುಚ್ಚಿಹಾಕಲು ಆರ್ಎಸ್ಎಸ್ ವಿರುದ್ಧ ಈ ಹುನ್ನಾರ ಮಾಡುತ್ತಿದೆ ಎಂದರು.
ಇದನ್ನು ಓದಿ: ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನ ನಡೆಸಲು ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ರಿಯಾಕ್ಷನ್
ಸರ್ಕಾರಿ ಜಾಗ ಬಳಸಲು ಶಿಷ್ಟಾಚಾರ ಇರಲಿ, ಅದು ಸಮಸ್ಯೆ ಅಲ್ಲ. ಸರ್ಕಾರದ ಮಾನದಂಡವನ್ನು ಪಾಲನೆ ಮಾಡಿದರೆ ಅನುಮತಿ ಕೊಡಲೇಬೇಕು ಎಂದ ಸಂಸದರು, ಸರ್ಕಾರಕ್ಕೆ ಒಂದು ರಸ್ತೆ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತಿಲ್ಲ, ಅದನ್ನು ಮುಚ್ಚಿಹಾಕಲು ಈ ರೀತಿ ಸುದ್ದಿ ಮಾಡುತ್ತಿದ್ದಾರೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಪಿಡಿಒ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಎಲ್ಲರಿಗೂ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಕಾಂಗ್ರೆಸ್ನವರಿಗೆ ನಮ್ಮ ಸಿದ್ಧಾಂತ ಸರಿ ಇಲ್ಲ ಎಂದ ಮಾತ್ರಕ್ಕೆ ಈ ರೀತಿ ಮಾಡುವುದು ಸರಿಯಲ್ಲ. ತಮ್ಮ ಬಿಡುವಿನ ಸಮಯದಲ್ಲಿ ಅಽಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅಧಿಕಾರಿ ವಿರುದ್ಧ ಕ್ರಮ ಸರಿಯಲ್ಲ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…