ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಟ್ಟಣದ ಸುಣ್ಣದ ಬೀದಿಯ ಅಸೈನಾರ್ ರಜಾಕ್ (43) ಹಾಗೂ ಬಾಳುಗೋಡು ಬಿಟ್ಟಂಗಾಲ ಗ್ರಾಮದ ಮೋಹನ ಎ.ಜಿ.ಅಶೋಕ (42) ಆರೋಪಿಗಳು. ಬಂಧಿತರಿಂದ 1 ಕೆಜಿ 60 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಒಂಟಿಯಂಗಡಿ ರಸ್ತೆಯ ಪ್ರೌಢಶಾಲೆ ಮೈದಾನದ ಬಳಿಯ ಬಸ್ ತಂಗುದಾಣದಲ್ಲಿ ಇಬ್ಬರು ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್ಐಗಳಾದ ಎನ್.ಜೆ. ಲತಾ, ಬಿ.ಎಸ್. ವಾಣಿಶ್ರೀ, ಪ್ರಮೋದ್, ಎಎಸ್ಐ ಕೆ.ಬಿ.ಸೋಮಣ್ಣ, ಹೆಚ್.ಸಿಗಳಾದ ಎಸ್.ಎಲ್.ನವೀನ್ ಕುಮಾರ್, ಎಂ.ಬಸವರಾಜು, ಅಬ್ದುಲ್ ಮಜೀದ್, ಕೆ.ಎ.ಹನೀಫ್, ಎಂ.ಎಸ್. ಬೋಪಣ್ಣ, ರಾಧಾ, ಪಿ.ಸಿಗಳಾದ ಎಸ್.ಮಹೇಶ್, ಶಿವಪ್ರಸಾದ್, ಎಸ್.ರಾಜೇಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಶ್ಲಾಘಿಸಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…