ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ ಆಗಸ್ಟ್ ಅಂತ್ಯದವರೆಗೂ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.
ಈ ನಡುವೆ ಸೆಪ್ಟೆಂಬರ್ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಮೂಲಕ ಕೊಡಗು ಜನತೆಗೆ ಮತ್ತೆ ಶಾಕ್ ಎದುರಾಗಿದೆ.
ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿರುವುದರಿಂದ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ವಿಡಿಯೋ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಎಲ್ಲಾ ಅಧಿಕಾರಿಗಳು ನಿಯೋಜಿತ ಸ್ಥಳದಲ್ಲಿದ್ದು, ಮಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹೆಚ್ಚಾದರೆ ತಕ್ಷಣ ಪರಿಹಾರ ಹಾಗೂ ರಕ್ಷಣಾ ಕ್ರಮಗಳಿಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸಬೇಕು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಸುರಕ್ಷತೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…