ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ ಈಗ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೊಡಗು ಜನತೆ ಆಗಸ್ಟ್ ಅಂತ್ಯದವರೆಗೂ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.
ಈ ನಡುವೆ ಸೆಪ್ಟೆಂಬರ್ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಮೂಲಕ ಕೊಡಗು ಜನತೆಗೆ ಮತ್ತೆ ಶಾಕ್ ಎದುರಾಗಿದೆ.
ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿರುವುದರಿಂದ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ವಿಡಿಯೋ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ಎಲ್ಲಾ ಅಧಿಕಾರಿಗಳು ನಿಯೋಜಿತ ಸ್ಥಳದಲ್ಲಿದ್ದು, ಮಳೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹೆಚ್ಚಾದರೆ ತಕ್ಷಣ ಪರಿಹಾರ ಹಾಗೂ ರಕ್ಷಣಾ ಕ್ರಮಗಳಿಗೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ಸೆಪ್ಟೆಂಬರ್ನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸಬೇಕು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಸುರಕ್ಷತೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…