ಕೊಡಗು

ಆಟೋ ಬಾಡಿಕೆ ರೂ.40 ; ಪ್ರಾಯಾಣಿಕ ಗೂಗಲ್‌ ಪೇ ಮಾಡಿದ್ದು 34 ಸಾವಿರ !

ಮಡಿಕೇರಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ 40 ರೂ. ಪವಾತಿಸುವ ಬದಲಿಗೆ ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ 34 ಸಾವಿರ ರೂ.ಗಳನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ.

ಜೂ.11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬವರು ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಇಳಿದಿದ್ದಾರೆ. ಅವರು ಆಟೋ ಬಾಡಿಗೆ 40 ರೂ.ನೀಡಬೇಕಿತ್ತು. ಆದರೆ ಅವರ ಬಳಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ 500 ರೂ. ಗೂಗಲ್ ಪೇ ಮಾಡುವುದಾಗಿ ಹೇಳಿ ಬಾಡಿಗೆ ಹಣ ಕಳೆದು ಉಳಿದ 460 ರೂ. ಕ್ಯಾಶ್ ನೀಡುವಂತೆ ಕೇಳಿಕೊಂಡಿದ್ದಾರೆ. ತನ್ನ ಬಳಿ ಅಷ್ಟು ಹಣ ಇಲ್ಲದಿರುವುದರಿಂದ 340 ರೂ. ಗೂಗಲ್ ಪೇ ಮಾಡುವಂತೆ ಹೇಳಿದ ಚಾಲಕ ಸತೀಶ್ 300 ರೂ.ಗಳನ್ನು ಕೊಟ್ಟಿದ್ದಾರೆ. ಆದರೆ ಆಲಿಯವರು 340 ರೂ. ಗಳನ್ನು ಗೂಗಲ್ ಪೇ ಮಾಡುವ ಬದಲಾಗಿ ತನಗೆ ಅರಿವಿಲ್ಲದೆ 34.000 ರೂ.ಗಳನ್ನು ಚಾಲಕನಿಗೆ ಗೂಗಲ್ ಪೇ ಮಾಡಿದ್ದಾರೆ. ನಂತರ ಇಬ್ಬರೂ ಅಲ್ಲಿಂದ ಹೊರಟು ಹೋಗಿದ್ದಾರೆ.

ಇದಾದ ಸ್ವಲ್ಪ ಹೊತ್ತಿನ ಬಳಿಕ ಟ್ರಾನ್ಸಾಕ್ಷನ್ ಪರಿಶೀಲಿಸಿದ ಚಾಲಕ ಸತೀಶ್ ಅವರಿಗೆ ವಿಷಯ ಗಮನಕ್ಕೆ ಬಂದಿದೆ. ಆಲಿಯವರನ್ನು ಸಂಪರ್ಕಿಸಲು ಸಂಪರ್ಕ ಸಂಖ್ಯೆ ಸ್ಕ್ಯಾನರ್‌ನಲ್ಲಿ ಕೂಡ ಸಿಗದ ಕಾರಣ ಅವರನ್ನು ಸಂಪರ್ಕಿಸಲು ಕಷ್ಟವಾಗಿತ್ತು. ಹಾಗೆಯೇ ಹೆಚ್ಚುವರಿ ಹಣ ನೀಡಿದ ವಿಷಯ ಆಲಿಯವರಿಗೆ ಜೂ.12ರ ಮಧ್ಯಾಹ್ನದವರೆಗೂ ಗಮನಕ್ಕೆ ಬಂದಿರಲಿಲ್ಲ.

ಬ್ಯಾಂಕಿಗೆ ಬಂದು ಪಾಸ್ ಪುಸ್ತಕ ಪರಿಶೀಲಿಸಿದಾಗ 34.000 ರೂ.ಗಳನ್ನು ಹಿಂದಿನ ದಿನ ಆಟೋ ಚಾಲಕನಿಗೆ ನೀಡಿರುವುದು ಗೋಚರಿಸಿದೆ. ಈ ಕುರಿತು ಆಟೋ ಮಾಲೀಕರ, ಚಾಲಕರ ಸಂಘಕ್ಕೆ ಮಾಹಿತಿ ನೀಡಿದ ಮೇರೆಗೆ ಸಂಘದ ಮುಖೇನ ಮಾಹಿತಿಯನ್ನು ಗ್ರೂಪ್‌ನಲ್ಲಿ ಶೇರ್ ಮಾಡಲಾಗಿತ್ತು. ಇತರೆ ಚಾಲಕರು ಜೂ.11ರಂದು ನಡೆದ ಘಟನೆಯ ಬಗ್ಗೆ ಚಾಲಕ ಸತೀಶ್ ತಮ್ಮ ಬಳಿ ತಿಳಿಸಿರುವುದಾಗಿ ಸಂಘದವರಲ್ಲಿ ಮಾಹಿತಿ ನೀಡಿದ್ದಾರೆ.

ಸಂಘದಿಂದ ಚಾಲಕ ಸತೀಶ್‌ರವರನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕಲಾಗಿತ್ತು. ಜೂ.11ರಂದೇ ಆಲಿರವರ ಖಾತೆಗೆ 1 ರೂ. ಗೂಗಲ್ ಪೇ ಮಾಡಿ ಅವರದ್ದೇ ಖಾತೆ ಎಂದು ಖಾತರಿ ಪಡಿಸುವಂತೆ ಮೆಸೇಜ್ ಮಾಡಿರುವುದಾಗಿ ಚಾಲಕ ಸತೀಶ್ ಸ್ಪಷ್ಟಪಡಿಸಿದ್ದಾರೆ. ಆದರೆ ಆಲಿ ಅವರು ಅದನ್ನೂ ಗಮನಿಸಿರಲಿಲ್ಲ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

12 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago