ಮಡಿಕೇರಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ 40 ರೂ. ಪವಾತಿಸುವ ಬದಲಿಗೆ ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ 34 ಸಾವಿರ ರೂ.ಗಳನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ.
ಜೂ.11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬವರು ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಇಳಿದಿದ್ದಾರೆ. ಅವರು ಆಟೋ ಬಾಡಿಗೆ 40 ರೂ.ನೀಡಬೇಕಿತ್ತು. ಆದರೆ ಅವರ ಬಳಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ 500 ರೂ. ಗೂಗಲ್ ಪೇ ಮಾಡುವುದಾಗಿ ಹೇಳಿ ಬಾಡಿಗೆ ಹಣ ಕಳೆದು ಉಳಿದ 460 ರೂ. ಕ್ಯಾಶ್ ನೀಡುವಂತೆ ಕೇಳಿಕೊಂಡಿದ್ದಾರೆ. ತನ್ನ ಬಳಿ ಅಷ್ಟು ಹಣ ಇಲ್ಲದಿರುವುದರಿಂದ 340 ರೂ. ಗೂಗಲ್ ಪೇ ಮಾಡುವಂತೆ ಹೇಳಿದ ಚಾಲಕ ಸತೀಶ್ 300 ರೂ.ಗಳನ್ನು ಕೊಟ್ಟಿದ್ದಾರೆ. ಆದರೆ ಆಲಿಯವರು 340 ರೂ. ಗಳನ್ನು ಗೂಗಲ್ ಪೇ ಮಾಡುವ ಬದಲಾಗಿ ತನಗೆ ಅರಿವಿಲ್ಲದೆ 34.000 ರೂ.ಗಳನ್ನು ಚಾಲಕನಿಗೆ ಗೂಗಲ್ ಪೇ ಮಾಡಿದ್ದಾರೆ. ನಂತರ ಇಬ್ಬರೂ ಅಲ್ಲಿಂದ ಹೊರಟು ಹೋಗಿದ್ದಾರೆ.
ಇದಾದ ಸ್ವಲ್ಪ ಹೊತ್ತಿನ ಬಳಿಕ ಟ್ರಾನ್ಸಾಕ್ಷನ್ ಪರಿಶೀಲಿಸಿದ ಚಾಲಕ ಸತೀಶ್ ಅವರಿಗೆ ವಿಷಯ ಗಮನಕ್ಕೆ ಬಂದಿದೆ. ಆಲಿಯವರನ್ನು ಸಂಪರ್ಕಿಸಲು ಸಂಪರ್ಕ ಸಂಖ್ಯೆ ಸ್ಕ್ಯಾನರ್ನಲ್ಲಿ ಕೂಡ ಸಿಗದ ಕಾರಣ ಅವರನ್ನು ಸಂಪರ್ಕಿಸಲು ಕಷ್ಟವಾಗಿತ್ತು. ಹಾಗೆಯೇ ಹೆಚ್ಚುವರಿ ಹಣ ನೀಡಿದ ವಿಷಯ ಆಲಿಯವರಿಗೆ ಜೂ.12ರ ಮಧ್ಯಾಹ್ನದವರೆಗೂ ಗಮನಕ್ಕೆ ಬಂದಿರಲಿಲ್ಲ.
ಬ್ಯಾಂಕಿಗೆ ಬಂದು ಪಾಸ್ ಪುಸ್ತಕ ಪರಿಶೀಲಿಸಿದಾಗ 34.000 ರೂ.ಗಳನ್ನು ಹಿಂದಿನ ದಿನ ಆಟೋ ಚಾಲಕನಿಗೆ ನೀಡಿರುವುದು ಗೋಚರಿಸಿದೆ. ಈ ಕುರಿತು ಆಟೋ ಮಾಲೀಕರ, ಚಾಲಕರ ಸಂಘಕ್ಕೆ ಮಾಹಿತಿ ನೀಡಿದ ಮೇರೆಗೆ ಸಂಘದ ಮುಖೇನ ಮಾಹಿತಿಯನ್ನು ಗ್ರೂಪ್ನಲ್ಲಿ ಶೇರ್ ಮಾಡಲಾಗಿತ್ತು. ಇತರೆ ಚಾಲಕರು ಜೂ.11ರಂದು ನಡೆದ ಘಟನೆಯ ಬಗ್ಗೆ ಚಾಲಕ ಸತೀಶ್ ತಮ್ಮ ಬಳಿ ತಿಳಿಸಿರುವುದಾಗಿ ಸಂಘದವರಲ್ಲಿ ಮಾಹಿತಿ ನೀಡಿದ್ದಾರೆ.
ಸಂಘದಿಂದ ಚಾಲಕ ಸತೀಶ್ರವರನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕಲಾಗಿತ್ತು. ಜೂ.11ರಂದೇ ಆಲಿರವರ ಖಾತೆಗೆ 1 ರೂ. ಗೂಗಲ್ ಪೇ ಮಾಡಿ ಅವರದ್ದೇ ಖಾತೆ ಎಂದು ಖಾತರಿ ಪಡಿಸುವಂತೆ ಮೆಸೇಜ್ ಮಾಡಿರುವುದಾಗಿ ಚಾಲಕ ಸತೀಶ್ ಸ್ಪಷ್ಟಪಡಿಸಿದ್ದಾರೆ. ಆದರೆ ಆಲಿ ಅವರು ಅದನ್ನೂ ಗಮನಿಸಿರಲಿಲ್ಲ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…