ಮಡಿಕೇರಿ: ಆಟೋ ರಿಕ್ಷಾದಲ್ಲಿ ಪ್ರಯಾಣಿಕರೊಬ್ಬರು ತಾನು ಪ್ರಯಾಣಿಸಿದ 2 ಕಿ.ಮೀ. ಅಂತರದ ಪ್ರಯಾಣಕ್ಕೆ 40 ರೂ. ಪವಾತಿಸುವ ಬದಲಿಗೆ ತಮಗರಿವಿಲ್ಲದೇ ಗೂಗಲ್ ಪೇ ಮಾಡಿದ್ದ 34 ಸಾವಿರ ರೂ.ಗಳನ್ನು ಹಿಂತಿರುಗಿಸುವ ಮೂಲಕ ಮಡಿಕೇರಿಯ ಆಟೋ ಚಾಲಕ ಸತೀಶ್ ಹಾಗೂ ಆಟೋ ಮಾಲೀಕರ, ಚಾಲಕರ ಸಂಘದವರು ಪ್ರಾಮಾಣಿಕತೆ ಮೆರೆದಿದ್ದಾರೆ.
ಜೂ.11ರಂದು ಎಮ್ಮೆಮಾಡು ನಿವಾಸಿ ಆಲಿ ಎಂಬವರು ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿಯಿಂದ ಆಟೋ ಏರಿ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಇಳಿದಿದ್ದಾರೆ. ಅವರು ಆಟೋ ಬಾಡಿಗೆ 40 ರೂ.ನೀಡಬೇಕಿತ್ತು. ಆದರೆ ಅವರ ಬಳಿ ಹಣವಿರದ ಕಾರಣ ಬಾಡಿಗೆಯ ಹಣ ಸೇರಿಸಿ 500 ರೂ. ಗೂಗಲ್ ಪೇ ಮಾಡುವುದಾಗಿ ಹೇಳಿ ಬಾಡಿಗೆ ಹಣ ಕಳೆದು ಉಳಿದ 460 ರೂ. ಕ್ಯಾಶ್ ನೀಡುವಂತೆ ಕೇಳಿಕೊಂಡಿದ್ದಾರೆ. ತನ್ನ ಬಳಿ ಅಷ್ಟು ಹಣ ಇಲ್ಲದಿರುವುದರಿಂದ 340 ರೂ. ಗೂಗಲ್ ಪೇ ಮಾಡುವಂತೆ ಹೇಳಿದ ಚಾಲಕ ಸತೀಶ್ 300 ರೂ.ಗಳನ್ನು ಕೊಟ್ಟಿದ್ದಾರೆ. ಆದರೆ ಆಲಿಯವರು 340 ರೂ. ಗಳನ್ನು ಗೂಗಲ್ ಪೇ ಮಾಡುವ ಬದಲಾಗಿ ತನಗೆ ಅರಿವಿಲ್ಲದೆ 34.000 ರೂ.ಗಳನ್ನು ಚಾಲಕನಿಗೆ ಗೂಗಲ್ ಪೇ ಮಾಡಿದ್ದಾರೆ. ನಂತರ ಇಬ್ಬರೂ ಅಲ್ಲಿಂದ ಹೊರಟು ಹೋಗಿದ್ದಾರೆ.
ಇದಾದ ಸ್ವಲ್ಪ ಹೊತ್ತಿನ ಬಳಿಕ ಟ್ರಾನ್ಸಾಕ್ಷನ್ ಪರಿಶೀಲಿಸಿದ ಚಾಲಕ ಸತೀಶ್ ಅವರಿಗೆ ವಿಷಯ ಗಮನಕ್ಕೆ ಬಂದಿದೆ. ಆಲಿಯವರನ್ನು ಸಂಪರ್ಕಿಸಲು ಸಂಪರ್ಕ ಸಂಖ್ಯೆ ಸ್ಕ್ಯಾನರ್ನಲ್ಲಿ ಕೂಡ ಸಿಗದ ಕಾರಣ ಅವರನ್ನು ಸಂಪರ್ಕಿಸಲು ಕಷ್ಟವಾಗಿತ್ತು. ಹಾಗೆಯೇ ಹೆಚ್ಚುವರಿ ಹಣ ನೀಡಿದ ವಿಷಯ ಆಲಿಯವರಿಗೆ ಜೂ.12ರ ಮಧ್ಯಾಹ್ನದವರೆಗೂ ಗಮನಕ್ಕೆ ಬಂದಿರಲಿಲ್ಲ.
ಬ್ಯಾಂಕಿಗೆ ಬಂದು ಪಾಸ್ ಪುಸ್ತಕ ಪರಿಶೀಲಿಸಿದಾಗ 34.000 ರೂ.ಗಳನ್ನು ಹಿಂದಿನ ದಿನ ಆಟೋ ಚಾಲಕನಿಗೆ ನೀಡಿರುವುದು ಗೋಚರಿಸಿದೆ. ಈ ಕುರಿತು ಆಟೋ ಮಾಲೀಕರ, ಚಾಲಕರ ಸಂಘಕ್ಕೆ ಮಾಹಿತಿ ನೀಡಿದ ಮೇರೆಗೆ ಸಂಘದ ಮುಖೇನ ಮಾಹಿತಿಯನ್ನು ಗ್ರೂಪ್ನಲ್ಲಿ ಶೇರ್ ಮಾಡಲಾಗಿತ್ತು. ಇತರೆ ಚಾಲಕರು ಜೂ.11ರಂದು ನಡೆದ ಘಟನೆಯ ಬಗ್ಗೆ ಚಾಲಕ ಸತೀಶ್ ತಮ್ಮ ಬಳಿ ತಿಳಿಸಿರುವುದಾಗಿ ಸಂಘದವರಲ್ಲಿ ಮಾಹಿತಿ ನೀಡಿದ್ದಾರೆ.
ಸಂಘದಿಂದ ಚಾಲಕ ಸತೀಶ್ರವರನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕಲಾಗಿತ್ತು. ಜೂ.11ರಂದೇ ಆಲಿರವರ ಖಾತೆಗೆ 1 ರೂ. ಗೂಗಲ್ ಪೇ ಮಾಡಿ ಅವರದ್ದೇ ಖಾತೆ ಎಂದು ಖಾತರಿ ಪಡಿಸುವಂತೆ ಮೆಸೇಜ್ ಮಾಡಿರುವುದಾಗಿ ಚಾಲಕ ಸತೀಶ್ ಸ್ಪಷ್ಟಪಡಿಸಿದ್ದಾರೆ. ಆದರೆ ಆಲಿ ಅವರು ಅದನ್ನೂ ಗಮನಿಸಿರಲಿಲ್ಲ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…