ಸಿದ್ದಾಪುರ: ಅವರೆಗುಂದ ಬಸವನಹಳ್ಳಿಯ ಬಳಿ ಆಹಾರ ತ್ಯಜಿಸಿ ನಿತ್ರಾಣಗೊಂಡಿದ್ದ ೫ ತಿಂಗಳ ಮರಿ ಆನೆ ಚಿಕಿತ್ಸೆ ಫಲಕಾರಿಯಾಗದೆ ದುಬಾರೆ ಶಿಬಿರದಲ್ಲಿ ಮೃತಪಟ್ಟಿದೆ.
ಕಳೆದೆರಡು ದಿನಗಳಿಂದ ವನ್ಯಜೀವಿ ವೈದ್ಯರಾದ ಡಾ. ಚೆಟ್ಟಿಯಪ್ಪ ಅವರು ಮರಿ ಆನೆಗೆ ಚಿಕಿತ್ಸೆಯೊಂದಿಗೆ ಆರೈಕೆ ಮಾಡಿದ್ದರು. ಸ್ವಲ್ಪಮಟ್ಟಿಗೆ ಚೇತರಿಸಿಕೊಂಡ ನಂತರ ದುಬಾರೆ ಶಿಬಿರಕ್ಕೆ ಸ್ಥಳಾಂತರಿಸಲಾಗಿತ್ತು.
ಗಂಜಿ, ಹಾಲು ಸೇರಿದಂತೆ ಗ್ಲುಕೋಸ್ ನೀಡಿ ಆರೈಕೆಯೊಂದಿಗೆ ಮತ್ತೆ ಚಿಕಿತ್ಸೆ ಮುಂದುವರಿಸಿ ನಿಗಾ ವಹಿಸಲಾಗಿತ್ತು. ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮರಿ ಆನೆ ಮೃತಪಟ್ಟಿದೆ.
ನಿಯಮಾನುಸಾರ ಮರಿ ಆನೆಯ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…