ಕೊಡಗು

ಕೊಡಗಿನಲ್ಲಿ ವರುಣನ ಆರ್ಭಟ : ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ ಸಾಗಾಣಿಕೆಯ ಲಾರಿಗಳಿಗೆ ನಿಷೇಧಿಸಲಾಗಿದೆ. ೧೮೫೦೦ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಡಿಸಿ ನಿಷೇಧ ಹೇರಿದ್ದಾರೆ.

ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ೨೪ ಗಂಟೆಯೂ ನಿಗಾ ಇಡಲಾಗಿದ್ದು, ಸಾರಿಗೆ ಪೊಲೀಸ್‌ ಸಿಬ್ಬಂದಿ  ಹೆದ್ದಾರಿಗಳಲ್ಲಿ ಪೆಟ್ರೋಲಿಂಗ್‌ ನಡೆಸಲಿದ್ದಾರೆ. ಹಾಲು, ಇಂಧನ ಅನಿಲ ಪೂರೈಕೆ ವಾಹನಗಳಿಗೆ ರಿಯಾಯಿತಿ ನೀಡಲಾಗಿದೆ. ಮಳೆಗಾಲ ಮುಗಿಯುವ ತನಕ ಜಿಲ್ಲೆಯಲ್ಲಿ  ಬೃಹತ್‌ ವಾಹನಗಳ ಸಂಚಾರ ನಿಷೇಧವಿರಲಿದ್ದು, ಸದ್ಯ ಜುಲೈ ೧ ರಿಂದ ೩೦ ರವರೆಗೆ ಆದೇಶ ಹೊರಡಿಸಲಾಗಿದೆ

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

2 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

2 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

3 hours ago

ಶತಾಯುಷಿ ಸುತಾರ್ ವಿಧಿವಶ ; ದೇಶ-ವಿದೇಶ ನಾಯಕರ ಪ್ರತಿಮೆ ಕೆತ್ತಿದ್ದ ಹೆಗ್ಗಳಿಕೆ

ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್‌ ಸುತಾರ್‌ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸದ್ದು ಮಾಡುತ್ತಿರುವ ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವ

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…

3 hours ago