ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ ಸಾಗಾಣಿಕೆಯ ಲಾರಿಗಳಿಗೆ ನಿಷೇಧಿಸಲಾಗಿದೆ. ೧೮೫೦೦ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಡಿಸಿ ನಿಷೇಧ ಹೇರಿದ್ದಾರೆ.
ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ೨೪ ಗಂಟೆಯೂ ನಿಗಾ ಇಡಲಾಗಿದ್ದು, ಸಾರಿಗೆ ಪೊಲೀಸ್ ಸಿಬ್ಬಂದಿ ಹೆದ್ದಾರಿಗಳಲ್ಲಿ ಪೆಟ್ರೋಲಿಂಗ್ ನಡೆಸಲಿದ್ದಾರೆ. ಹಾಲು, ಇಂಧನ ಅನಿಲ ಪೂರೈಕೆ ವಾಹನಗಳಿಗೆ ರಿಯಾಯಿತಿ ನೀಡಲಾಗಿದೆ. ಮಳೆಗಾಲ ಮುಗಿಯುವ ತನಕ ಜಿಲ್ಲೆಯಲ್ಲಿ ಬೃಹತ್ ವಾಹನಗಳ ಸಂಚಾರ ನಿಷೇಧವಿರಲಿದ್ದು, ಸದ್ಯ ಜುಲೈ ೧ ರಿಂದ ೩೦ ರವರೆಗೆ ಆದೇಶ ಹೊರಡಿಸಲಾಗಿದೆ
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…