ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ ಸಾಗಾಣಿಕೆಯ ಲಾರಿಗಳಿಗೆ ನಿಷೇಧಿಸಲಾಗಿದೆ. ೧೮೫೦೦ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಡಿಸಿ ನಿಷೇಧ ಹೇರಿದ್ದಾರೆ.
ಈಗಾಗಲೇ ಜಿಲ್ಲೆಯ ಗಡಿಗಳಲ್ಲಿ ೨೪ ಗಂಟೆಯೂ ನಿಗಾ ಇಡಲಾಗಿದ್ದು, ಸಾರಿಗೆ ಪೊಲೀಸ್ ಸಿಬ್ಬಂದಿ ಹೆದ್ದಾರಿಗಳಲ್ಲಿ ಪೆಟ್ರೋಲಿಂಗ್ ನಡೆಸಲಿದ್ದಾರೆ. ಹಾಲು, ಇಂಧನ ಅನಿಲ ಪೂರೈಕೆ ವಾಹನಗಳಿಗೆ ರಿಯಾಯಿತಿ ನೀಡಲಾಗಿದೆ. ಮಳೆಗಾಲ ಮುಗಿಯುವ ತನಕ ಜಿಲ್ಲೆಯಲ್ಲಿ ಬೃಹತ್ ವಾಹನಗಳ ಸಂಚಾರ ನಿಷೇಧವಿರಲಿದ್ದು, ಸದ್ಯ ಜುಲೈ ೧ ರಿಂದ ೩೦ ರವರೆಗೆ ಆದೇಶ ಹೊರಡಿಸಲಾಗಿದೆ
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…