ಕೊಡಗು

ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ ಹರಣ: ಆಗಸ್ಟ್ 15ಕ್ಕೆ ಕರಾಳ ಸ್ವತಂತ್ರ ದಿನಾಚರಣೆ

ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 ರಂದು ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಡಳಿತ ಮಂಡಳಿಯ ಮುಖ್ಯಸ್ಥರು, ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರಾಳ ಸ್ವತಂತ್ರ ದಿನಾಚರಣೆ ದಿನವಾಗಿ ಆಚರಿಸಲಾಗುವುದು ಎಂದು ಕೊಡಗು ಜಿಲ್ಲಾ ಅನುದಾನರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಘಟಕದ ಜಿಲ್ಲಾಧ್ಯಕ್ಷ ಜರು ಗಣಪತಿ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿವರ್ಷ ಮಾನ್ಯತೆ ನವೀಕರಣ ಮಾಡುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿಗೆ ಹೊರೆ ಆಗಿರುತ್ತದೆ, ಇದರ ಜೊತೆ ಭೂ ಪರಿವರ್ತನೆ, ಶಾಲಾ ಕಟ್ಟಡ ತೆರಿಗೆ, RTE ಮರು ಪಾವತಿ ವಿಳಂಬ ಇವೆಲ್ಲಾ ತೊಂದರೆಗಳು ಇವೆ. ಶಿಕ್ಷಣ ಸಂಸ್ಥೆಗಳು ನ್ಯಾಯಾಲಯದ ಆದೇಶ ಮಾಡಿಸಿದ್ದರೂ ನಿಯಮದ ಹೆಸರಿನಲ್ಲಿ ಅಲೆದಾಡಿಸುವುದು, ವಿಳಂಬ ಧೋರಣೆ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಿಂಸೆ ನೀಡಲಾಗುತ್ತಿದೆ. ಖಾಸಗಿ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗುವ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ಇದರ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿದರೂ ಸರ್ಕಾರ ಕಳೆದ ಸರ್ಕಾರದ ಅಧಿಕಾರಿಗಳನ್ನೇ ಮುಂದುವರಿಸಲಾಗಿದೆ. ನಮ್ಮ ಸಂಸ್ಥೆಗಳ ಹಿತ ರಕ್ಷಣೆ ಕಾಪಾಡುವಲ್ಲಿ ಸರ್ಕಾರ ಮುಂದಾಗುತ್ತಿಲ್ಲ. ಶಿಕ್ಷಣ ಇಲಾಖೆಯು ಅವೈಜ್ಞಾನಿಕ ನಿಯಮಗಳನ್ನು ಜಾರಿಗೆ ತರುತ್ತಿದೆ ಎಂದು ತಿಳಿಸಿದ್ದಾರೆ.

ಒಂದು ಕಡೆ ಮಕ್ಕಳ ಭವಿಷ್ಯ ಇನ್ನೊಂದೆಡೆ ಶಿಕ್ಷಣ ಸಂಸ್ಥೆಗಳ ಅಳಿವು-ಉಳಿವು ನೋಡಿಕೊಳ್ಳಬೇಕಿದೆ. ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಆಗುತ್ತಿರುವ ಶೋಷಣೆ ಕುರಿತು ಸಾಮಾಜಿಕ ಜಾಲತಾಣ, ಬಿತ್ತಿ ಪತ್ರ, ಬ್ಯಾನರ್‌ಗಳ ಮೂಲಕ ಸಾರ್ವಜನಿಕರಿಗೆ, ಪಾಲಕರಿಗೆ, ಬುದ್ದಿಜೀವಿಗಳಿಗೆ ಜಾಗೃತಿ ಮೂಡಿಸಲಾಗುವುದು. ನಮ್ಮ ಸಂಸ್ಥೆಗಳ ಉಳಿವಿಗಾಗಿ ನಿರಂತರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ರಾಜ್ಯದ ಸಂಘಟನೆಗೆ ಕೊಡಗು ಜಿಲ್ಲೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

37 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

51 mins ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

59 mins ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

1 hour ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

1 hour ago