ಮಡಿಕೇರಿ:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 ರಂದು ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಡಳಿತ ಮಂಡಳಿಯ ಮುಖ್ಯಸ್ಥರು, ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರಾಳ ಸ್ವತಂತ್ರ ದಿನಾಚರಣೆ ದಿನವಾಗಿ ಆಚರಿಸಲಾಗುವುದು ಎಂದು ಕೊಡಗು ಜಿಲ್ಲಾ ಅನುದಾನರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಘಟಕದ ಜಿಲ್ಲಾಧ್ಯಕ್ಷ ಜರು ಗಣಪತಿ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿವರ್ಷ ಮಾನ್ಯತೆ ನವೀಕರಣ ಮಾಡುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿಗೆ ಹೊರೆ ಆಗಿರುತ್ತದೆ, ಇದರ ಜೊತೆ ಭೂ ಪರಿವರ್ತನೆ, ಶಾಲಾ ಕಟ್ಟಡ ತೆರಿಗೆ, RTE ಮರು ಪಾವತಿ ವಿಳಂಬ ಇವೆಲ್ಲಾ ತೊಂದರೆಗಳು ಇವೆ. ಶಿಕ್ಷಣ ಸಂಸ್ಥೆಗಳು ನ್ಯಾಯಾಲಯದ ಆದೇಶ ಮಾಡಿಸಿದ್ದರೂ ನಿಯಮದ ಹೆಸರಿನಲ್ಲಿ ಅಲೆದಾಡಿಸುವುದು, ವಿಳಂಬ ಧೋರಣೆ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಿಂಸೆ ನೀಡಲಾಗುತ್ತಿದೆ. ಖಾಸಗಿ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗುವ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ಇದರ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿದರೂ ಸರ್ಕಾರ ಕಳೆದ ಸರ್ಕಾರದ ಅಧಿಕಾರಿಗಳನ್ನೇ ಮುಂದುವರಿಸಲಾಗಿದೆ. ನಮ್ಮ ಸಂಸ್ಥೆಗಳ ಹಿತ ರಕ್ಷಣೆ ಕಾಪಾಡುವಲ್ಲಿ ಸರ್ಕಾರ ಮುಂದಾಗುತ್ತಿಲ್ಲ. ಶಿಕ್ಷಣ ಇಲಾಖೆಯು ಅವೈಜ್ಞಾನಿಕ ನಿಯಮಗಳನ್ನು ಜಾರಿಗೆ ತರುತ್ತಿದೆ ಎಂದು ತಿಳಿಸಿದ್ದಾರೆ.
ಒಂದು ಕಡೆ ಮಕ್ಕಳ ಭವಿಷ್ಯ ಇನ್ನೊಂದೆಡೆ ಶಿಕ್ಷಣ ಸಂಸ್ಥೆಗಳ ಅಳಿವು-ಉಳಿವು ನೋಡಿಕೊಳ್ಳಬೇಕಿದೆ. ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಆಗುತ್ತಿರುವ ಶೋಷಣೆ ಕುರಿತು ಸಾಮಾಜಿಕ ಜಾಲತಾಣ, ಬಿತ್ತಿ ಪತ್ರ, ಬ್ಯಾನರ್ಗಳ ಮೂಲಕ ಸಾರ್ವಜನಿಕರಿಗೆ, ಪಾಲಕರಿಗೆ, ಬುದ್ದಿಜೀವಿಗಳಿಗೆ ಜಾಗೃತಿ ಮೂಡಿಸಲಾಗುವುದು. ನಮ್ಮ ಸಂಸ್ಥೆಗಳ ಉಳಿವಿಗಾಗಿ ನಿರಂತರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ರಾಜ್ಯದ ಸಂಘಟನೆಗೆ ಕೊಡಗು ಜಿಲ್ಲೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…