ಕೊಡಗು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಸವಾರ ಸಾವು

ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ.

ಸವಾರರು ರಾತ್ರಿ ಮಡಿಕೇರಿ ದಸರಾ ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ಸಂದರ್ಭ ನಿಯಂತ್ರಣ ಕಳೆದುಕೊಂಡು ಬೈಕ್ ವಿದ್ಯುತ್ ಕಂಬಕ್ಕೆ ಬಡಿದಿದೆ. ವಿದ್ಯುತ್ ಕಂಬಕ್ಕೆ ಬೈಕ್ ಅಪ್ಪಳಿಸಿದ ರಭಸಕ್ಕೆ ಸವಾರ ಗಂಭೀರವಾಗಿ ಗಾಯಗೊಂಡು ಉಸಿರು ನಿಲ್ಲಿಸಿದ್ದರೆ, ಹಿಂಬದಿ ಸವಾರನ ಸಮೇತ ಬೈಕ್ ಪಕ್ಕದ ತೋಡಿನೊಳಗೆ ಬಿದ್ದಿದೆ.

ವಿಷಯ ಅರಿತು ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯರು ತೋಡಿನೊಳಗೆ ಬಿದ್ದಿದ್ದ ಹಿಂಬದಿ ಸವಾರನನ್ನು ರಕ್ಷಿಸಿದ್ದಾರೆ. ಬಳಿಕ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

1 min ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

6 mins ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

9 mins ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

42 mins ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

46 mins ago