ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಕಾರ್ಯಾಚರಣೆಗಿಳಿದಾಗ ಸೋಮವಾರಪೇಟೆ ದೊಡ್ಡಮಳ್ತೆ ನಿವಾಸಿ ಚಂದನ್ (29) ಎಂಬಾತ ಬೈಕ್ ಅನ್ನು ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಸುಂಟಿಕೊಪ್ಪ ಪಿಎಸ್ ಐ ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಪಿಎಸ್ಐ ಭಾರತಿ ಅವರ ನೇತೃತ್ವದ ತಂಡ ಹೆಚ್.ಡಿ.ಕೋಟೆಯ ಸರಗೂರುವಿನಲ್ಲಿ ಆರೋಪಿ ಚಂದನ್ ನನ್ನು ಬಂಧಿಸಿ ಕಳ್ಳತನವಾಗಿದ್ದ ಬೈಕ್ ಅನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…
ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…
ಬೆಂಗಳೂರು: ಹೊಸ ವರ್ಷದ ಆಚರಣೆಗೆ ಜನ ಪ್ರವಾಸಿ ತಾಣಗಳತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಪ್ರವಾಸಿ ತಾಣಗಳು ಜನ ಜಂಗುಳಿಯಿಂದ ತುಂಬಿ…
ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು,…
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…
ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…