ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಕಾರ್ಯಾಚರಣೆಗಿಳಿದಾಗ ಸೋಮವಾರಪೇಟೆ ದೊಡ್ಡಮಳ್ತೆ ನಿವಾಸಿ ಚಂದನ್ (29) ಎಂಬಾತ ಬೈಕ್ ಅನ್ನು ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಸುಂಟಿಕೊಪ್ಪ ಪಿಎಸ್ ಐ ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಪಿಎಸ್ಐ ಭಾರತಿ ಅವರ ನೇತೃತ್ವದ ತಂಡ ಹೆಚ್.ಡಿ.ಕೋಟೆಯ ಸರಗೂರುವಿನಲ್ಲಿ ಆರೋಪಿ ಚಂದನ್ ನನ್ನು ಬಂಧಿಸಿ ಕಳ್ಳತನವಾಗಿದ್ದ ಬೈಕ್ ಅನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…
ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…