ಕೊಡಗು

ಕೊಡಗು: ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ಮತಯಾಚನೆ

ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ ಇಲ್ಲದೆ ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಪ್ರಪಂಚದಲ್ಲೆ ಭಾರತದ ಘನತೆಯನ್ನು ಎತ್ತಿ ಹಿಡಿದ ವಿಶ್ವ ನಾಯಕ ನರೇಂದ್ರ ಮೋದಿಯನ್ನು ಮತ್ತೊಮ್ಮ ಪ್ರಧಾನಿ ಯನ್ನಾಗಿಸಲು ತಮ್ಮಗೆ ಮತ ನೀಡಿ ವಿಜಯಶಾಲಿಯನ್ನಾಗಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

2014ರಲ್ಲಿ ಆರ್ಥಿಕ ಪ್ರಗತಿಯಲ್ಲಿ 17ನೇಸ್ಥಾನದಲ್ಲಿಇದ್ದ ಭಾರತವನ್ನು 10ವರ್ಷದಲ್ಲಿ 5ನೇ ಸ್ಥಾನಕ್ಕೆ ಏರಿಸಿದ್ದು 70ಏರ್ಪೋರ್ಟ್ ಇದ್ದ ದೇಶದಲ್ಲಿ 150ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಮೂಲಕ ಪ್ರಗತಿಪತದಲ್ಲಿ ಮುನ್ನಡೆಸುತ್ತಿದ್ದಾರೆ ಎಂದರು.

ನಾವು ಉದ್ಯೋಗ ಆಕಾಂಕ್ಷಿಗಳು ಅಲ್ಲ ಉದ್ಯೋಗ ಸೃಷ್ಟಿಕರ್ತರಾಗಿಸುವಲ್ಲಿ ಶ್ರಮಿಸುತ್ತಿರುವ ಮೋದಿಯವರು ಸಾಂಸ್ಕೃತಿ, ಪರಂಪರೆಗಳನ್ನು ರಕ್ಷಿಸಿ ಪೋಷಿಸುವ ಕೆಲಸ ಮಾಡುವ ಮೂಲಕ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ವನ್ನು ಆಚರಿಸಿದರು ಎಂದು ತಿಳಿಸಿದರು.

ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯರಾದ ಸುಜಾ ಕುಶಾಲಪ್ಪ, ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ ಬೋಪಯ್ಯ ಜಿಲ್ಲಾಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ನೆಲ್ಲಿರ ಚಲನ್ ಕುಮಾರ್, ವಿ.ಕೆ.ಲೋಕೇಶ್, ತಾಲ್ಲೂಕು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಕರುಂಬಯ್ಯ ಕುಟ್ಟಂಡ, ಮಂಜು ಗಣಪತಿ ಮುದ್ದಿಯಡ, ಹಾಗೂ ಎಲ್ಲಾ ಶಕ್ತಿ ಕೇಂದ್ರ ಪ್ರಮುಖರು, ಸಹ ಪ್ರಮುಖರು, ಭೂತ್‌ ಅಧ್ಯಕ್ಷರುಗಳು, ವಿವಿಧ ಮೋರ್ಚಾ ಪದಾಧಿಕಾರಿಗಳು, ಪಂಚಾಯತ್‌ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು,ಮುಖಂಡರುಗಳು, ಹಿರಿಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

8 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

8 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

8 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

8 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

11 hours ago