ಕೊಡಗು

ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ: ಸಚಿವ ಭೋಸರಾಜು ಆಕ್ರೋಶ

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ. ಯಾವುದೇ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಗಳ ಜೊತೆ ಚರ್ಚೆಯನ್ನೇ ಮಾಡಿಲ್ಲ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬಿಲ್‌ ಅನ್ನು ಎರಡೂ ಸದನಗಳಲ್ಲಿ ಪಾಸ್ ಮಾಡಿದ್ದಾರೆ. ಯೋಜನೆಯಲ್ಲಿ ತಂದಿರುವ ಬದಲಾವಣೆ ಸರಿಯಲ್ಲ ಎಂಬುದು ರಾಜ್ಯ ಸರ್ಕಾರದ ವಾದ. ಬದಲಾವಣೆಯಂತೆ ಯೋಜನೆಯಲ್ಲಿ ಪಂಚಾಯಿತಿಗಳ ಹಕ್ಕನ್ನು ಕಸಿದುಕೊಂಡಿದ್ದಾರೆ. ಯುಪಿಎ ಅವಧಿಯಲ್ಲಿನ ಯೋಜನೆ ಪ್ರಾರಂಭದ ಉದ್ದೇಶವನ್ನೇ ಈಗ ಕೇಂದ್ರ ಸರ್ಕಾರ ತಿರುಚಿದೆ. ಕಾಯ್ದೆಯಲ್ಲಿ‌ ಅದಾನಿ ಅಂಬಾನಿಯವರಿಗೆ ಉಪಯೋಗ ಆಗುವಂತೆ ಕೇಂದ್ರ ಮಾಡಿದೆ. ಯೋಜನೆ ತಿದ್ದುಪಡಿಯಿಂದ ಎಲ್ಲಾ ರಾಜ್ಯಗಳಿಗೆ ಆರ್ಥಿಕ ಹೊರೆ ಆಗುತ್ತೆ ಆಗುತ್ತದೆ. ಯೋಜನೆಯ ಮೂಲ ಉದ್ದೇಶ ಹಳ್ಳ ಹಿಡಿಯಲಿ ಅಂತಾನೇ ಕೇಂದ್ರ ಹೀಗೆ ಮಾಡಿದೆ. ಬಡವರಿಗೆ ವಿರೋಧವಾಗಿರುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಭ್ರಷ್ಟಾಚಾರ ಆಗಿದೆ, ನಕಲಿ ಜಾಬ್ ಕಾರ್ಡ್ ಆಗಿದೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಭ್ರಷ್ಟಾಚಾರ ಆಗಿದೆ, ಆಗುತ್ತಿದೆ, ಯೋಜನೆ ಬದಲಾವಣೆಯಿಂದ ಅದು ಸರಿ ಆಗಲ್ಲ. ಭ್ರಷ್ಟಾಚಾರವೇ ನಡೆದಿಲ್ಲ ಅಂತ ನಾವು ಹೇಳಿಲ್ಲ ಎಂದು ಪರೋಕ್ಷವಾಗಿ ಮನರೇಗಾದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಒಪ್ಪಿಕೊಂಡರು.

ಇನ್ನು ಭ್ರಷ್ಟಾಚಾರವೇ ಆಗದಿರುವ ಒಂದೇ ಒಂದು ಯೋಜನೆ ಇದ್ದರೆ ತೋರಿಸಲಿ ನೋಡೋಣ. ಬೇರೆ ಎಲ್ಲಾ ರಾಜ್ಯಗಳು ಕೂಡ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನೀವೇ 100% ಭರಿಸಬೇಕು ಅಂತ ಚಂದ್ರಬಾಬು ನಾಯ್ಡು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಚಂದ್ರಬಾಬು ನಾಯ್ಡು ಏನಾದರೂ ಬೆಂಬಲ ವಾಪಸ್ ಪಡೆದರೆ ಕೇಂದ್ರ ಸರ್ಕಾರವೇ ಹೋಗುತ್ತದೆ. ಬೇರೆ ರಾಜ್ಯ ಸರ್ಕಾರಗಳ ಜೊತೆಗೆ ಯೋಜನೆಯ ತೊಂದರೆ ಬಗ್ಗೆ ಮಾತಾಡಿದೀವಿ. ಯೋಜನೆಗೆ ನಮ್ಮ ವಿರೋಧವಿದೆ ಎಂದು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ಕಳುಹಿಸಲಾಗಿದೆ. ಇವತ್ತಲ್ಲಾ ನಾಳೆ ಈ ಯೋಜನೆಯನ್ನು ಕೇಂದ್ರ ವಾಪಸ್ ಪಡೆಯಲೇಬೇಕು, ಪಡೆದೇ ಪಡೆಯುತ್ತೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

4 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

4 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago