ಕೊಡಗು

ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ: ಸಚಿವ ಭೋಸರಾಜು ಆಕ್ರೋಶ

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ. ಯಾವುದೇ ಸಂಘ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಗಳ ಜೊತೆ ಚರ್ಚೆಯನ್ನೇ ಮಾಡಿಲ್ಲ. ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಬಿಲ್‌ ಅನ್ನು ಎರಡೂ ಸದನಗಳಲ್ಲಿ ಪಾಸ್ ಮಾಡಿದ್ದಾರೆ. ಯೋಜನೆಯಲ್ಲಿ ತಂದಿರುವ ಬದಲಾವಣೆ ಸರಿಯಲ್ಲ ಎಂಬುದು ರಾಜ್ಯ ಸರ್ಕಾರದ ವಾದ. ಬದಲಾವಣೆಯಂತೆ ಯೋಜನೆಯಲ್ಲಿ ಪಂಚಾಯಿತಿಗಳ ಹಕ್ಕನ್ನು ಕಸಿದುಕೊಂಡಿದ್ದಾರೆ. ಯುಪಿಎ ಅವಧಿಯಲ್ಲಿನ ಯೋಜನೆ ಪ್ರಾರಂಭದ ಉದ್ದೇಶವನ್ನೇ ಈಗ ಕೇಂದ್ರ ಸರ್ಕಾರ ತಿರುಚಿದೆ. ಕಾಯ್ದೆಯಲ್ಲಿ‌ ಅದಾನಿ ಅಂಬಾನಿಯವರಿಗೆ ಉಪಯೋಗ ಆಗುವಂತೆ ಕೇಂದ್ರ ಮಾಡಿದೆ. ಯೋಜನೆ ತಿದ್ದುಪಡಿಯಿಂದ ಎಲ್ಲಾ ರಾಜ್ಯಗಳಿಗೆ ಆರ್ಥಿಕ ಹೊರೆ ಆಗುತ್ತೆ ಆಗುತ್ತದೆ. ಯೋಜನೆಯ ಮೂಲ ಉದ್ದೇಶ ಹಳ್ಳ ಹಿಡಿಯಲಿ ಅಂತಾನೇ ಕೇಂದ್ರ ಹೀಗೆ ಮಾಡಿದೆ. ಬಡವರಿಗೆ ವಿರೋಧವಾಗಿರುವ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನು ಭ್ರಷ್ಟಾಚಾರ ಆಗಿದೆ, ನಕಲಿ ಜಾಬ್ ಕಾರ್ಡ್ ಆಗಿದೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲಾ ಸರ್ಕಾರದಲ್ಲೂ ಭ್ರಷ್ಟಾಚಾರ ಆಗಿದೆ, ಆಗುತ್ತಿದೆ, ಯೋಜನೆ ಬದಲಾವಣೆಯಿಂದ ಅದು ಸರಿ ಆಗಲ್ಲ. ಭ್ರಷ್ಟಾಚಾರವೇ ನಡೆದಿಲ್ಲ ಅಂತ ನಾವು ಹೇಳಿಲ್ಲ ಎಂದು ಪರೋಕ್ಷವಾಗಿ ಮನರೇಗಾದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಒಪ್ಪಿಕೊಂಡರು.

ಇನ್ನು ಭ್ರಷ್ಟಾಚಾರವೇ ಆಗದಿರುವ ಒಂದೇ ಒಂದು ಯೋಜನೆ ಇದ್ದರೆ ತೋರಿಸಲಿ ನೋಡೋಣ. ಬೇರೆ ಎಲ್ಲಾ ರಾಜ್ಯಗಳು ಕೂಡ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನೀವೇ 100% ಭರಿಸಬೇಕು ಅಂತ ಚಂದ್ರಬಾಬು ನಾಯ್ಡು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಚಂದ್ರಬಾಬು ನಾಯ್ಡು ಏನಾದರೂ ಬೆಂಬಲ ವಾಪಸ್ ಪಡೆದರೆ ಕೇಂದ್ರ ಸರ್ಕಾರವೇ ಹೋಗುತ್ತದೆ. ಬೇರೆ ರಾಜ್ಯ ಸರ್ಕಾರಗಳ ಜೊತೆಗೆ ಯೋಜನೆಯ ತೊಂದರೆ ಬಗ್ಗೆ ಮಾತಾಡಿದೀವಿ. ಯೋಜನೆಗೆ ನಮ್ಮ ವಿರೋಧವಿದೆ ಎಂದು ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ಕಳುಹಿಸಲಾಗಿದೆ. ಇವತ್ತಲ್ಲಾ ನಾಳೆ ಈ ಯೋಜನೆಯನ್ನು ಕೇಂದ್ರ ವಾಪಸ್ ಪಡೆಯಲೇಬೇಕು, ಪಡೆದೇ ಪಡೆಯುತ್ತೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

30 mins ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

42 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…

60 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…

1 hour ago

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…

1 hour ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…

2 hours ago