Mysore
25
clear sky

Social Media

ಶನಿವಾರ, 07 ಮಾರ್ಚ್ 2026
Light
Dark

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ.

ಮಾರ್ಚ್ 3ರ ಮಂಗಳವಾರ ನಡೆಯುವ ಚಂದ್ರ ಗ್ರಹಣದ ಪ್ರಯುಕ್ತ ಕೊಡಗಿನ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ ಆಂಜನೇಯ ದೇವಾಲಯ ಹಾಗೂ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ದೇವರ ದರ್ಶನ ಹಾಗೂ ವಿವಿಧ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಧಾರ್ಮಿಕ ಕ್ರಮ ಅನುಸರಿಸಲಾಗುತ್ತಿದ್ದು, ಭಕ್ತರು ಸಹಕರಿಸಬೇಕಾಗಿ ಕೋರಿಕೊಳ್ಳಲಾಗಿದೆ.

ಮಾರ್ಚ್ 3ರಂದು ಬೆಳಿಗ್ಗೆ 7:30 ರಿಂದ ಬೆಳಿಗ್ಗೆ 9:00 ರವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಬೆಳಿಗ್ಗೆ 9:00 ಗಂಟೆಗೆ ಮಹಾ ಪೂಜೆ ನಡೆಯಲಿದ್ದು, ತದನಂತರ ದೇವಾಲಯವನ್ನು ಗ್ರಹಣ ಪ್ರಯುಕ್ತ ಮುಚ್ಚಲಾಗುವುದು. ಸಂಜೆ 6:48ರ ಗ್ರಹಣ ಮೋಕ್ಷದ ನಂತರ ದೇವಾಲಯವನ್ನು ತೆರೆಯಲಾಗುವುದು. (ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ) ರಾತ್ರಿ 8 ಗಂಟೆಗೆ ಮಹಾಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳಲು ಅವಕಾಶವಿದೆ. ನಂತರ ದೇವಾಲಯ ಮುಚ್ಚಲಾಗುತ್ತದೆ.

ಈ ಕುರಿತು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Tags:
error: Content is protected !!