ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ.
ಮಾರ್ಚ್ 3ರ ಮಂಗಳವಾರ ನಡೆಯುವ ಚಂದ್ರ ಗ್ರಹಣದ ಪ್ರಯುಕ್ತ ಕೊಡಗಿನ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ ಆಂಜನೇಯ ದೇವಾಲಯ ಹಾಗೂ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ದೇವರ ದರ್ಶನ ಹಾಗೂ ವಿವಿಧ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಧಾರ್ಮಿಕ ಕ್ರಮ ಅನುಸರಿಸಲಾಗುತ್ತಿದ್ದು, ಭಕ್ತರು ಸಹಕರಿಸಬೇಕಾಗಿ ಕೋರಿಕೊಳ್ಳಲಾಗಿದೆ.
ಮಾರ್ಚ್ 3ರಂದು ಬೆಳಿಗ್ಗೆ 7:30 ರಿಂದ ಬೆಳಿಗ್ಗೆ 9:00 ರವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಬೆಳಿಗ್ಗೆ 9:00 ಗಂಟೆಗೆ ಮಹಾ ಪೂಜೆ ನಡೆಯಲಿದ್ದು, ತದನಂತರ ದೇವಾಲಯವನ್ನು ಗ್ರಹಣ ಪ್ರಯುಕ್ತ ಮುಚ್ಚಲಾಗುವುದು. ಸಂಜೆ 6:48ರ ಗ್ರಹಣ ಮೋಕ್ಷದ ನಂತರ ದೇವಾಲಯವನ್ನು ತೆರೆಯಲಾಗುವುದು. (ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ) ರಾತ್ರಿ 8 ಗಂಟೆಗೆ ಮಹಾಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳಲು ಅವಕಾಶವಿದೆ. ನಂತರ ದೇವಾಲಯ ಮುಚ್ಚಲಾಗುತ್ತದೆ.
ಈ ಕುರಿತು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…