ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ.
ಮಾರ್ಚ್ 3ರ ಮಂಗಳವಾರ ನಡೆಯುವ ಚಂದ್ರ ಗ್ರಹಣದ ಪ್ರಯುಕ್ತ ಕೊಡಗಿನ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ ಆಂಜನೇಯ ದೇವಾಲಯ ಹಾಗೂ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ದೇವರ ದರ್ಶನ ಹಾಗೂ ವಿವಿಧ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಧಾರ್ಮಿಕ ಕ್ರಮ ಅನುಸರಿಸಲಾಗುತ್ತಿದ್ದು, ಭಕ್ತರು ಸಹಕರಿಸಬೇಕಾಗಿ ಕೋರಿಕೊಳ್ಳಲಾಗಿದೆ.
ಮಾರ್ಚ್ 3ರಂದು ಬೆಳಿಗ್ಗೆ 7:30 ರಿಂದ ಬೆಳಿಗ್ಗೆ 9:00 ರವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಬೆಳಿಗ್ಗೆ 9:00 ಗಂಟೆಗೆ ಮಹಾ ಪೂಜೆ ನಡೆಯಲಿದ್ದು, ತದನಂತರ ದೇವಾಲಯವನ್ನು ಗ್ರಹಣ ಪ್ರಯುಕ್ತ ಮುಚ್ಚಲಾಗುವುದು. ಸಂಜೆ 6:48ರ ಗ್ರಹಣ ಮೋಕ್ಷದ ನಂತರ ದೇವಾಲಯವನ್ನು ತೆರೆಯಲಾಗುವುದು. (ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ) ರಾತ್ರಿ 8 ಗಂಟೆಗೆ ಮಹಾಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳಲು ಅವಕಾಶವಿದೆ. ನಂತರ ದೇವಾಲಯ ಮುಚ್ಚಲಾಗುತ್ತದೆ.
ಈ ಕುರಿತು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…