ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ.
ಮಾರ್ಚ್ 3ರ ಮಂಗಳವಾರ ನಡೆಯುವ ಚಂದ್ರ ಗ್ರಹಣದ ಪ್ರಯುಕ್ತ ಕೊಡಗಿನ ಶ್ರೀ ಓಂಕಾರೇಶ್ವರ ದೇವಾಲಯ, ಶ್ರೀ ಆಂಜನೇಯ ದೇವಾಲಯ ಹಾಗೂ ಶ್ರೀ ಕೋಟೆ ಗಣಪತಿ ದೇವಾಲಯದಲ್ಲಿ ದೇವರ ದರ್ಶನ ಹಾಗೂ ವಿವಿಧ ಸೇವೆಯಲ್ಲಿ ವ್ಯತ್ಯಯ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಧಾರ್ಮಿಕ ಕ್ರಮ ಅನುಸರಿಸಲಾಗುತ್ತಿದ್ದು, ಭಕ್ತರು ಸಹಕರಿಸಬೇಕಾಗಿ ಕೋರಿಕೊಳ್ಳಲಾಗಿದೆ.
ಮಾರ್ಚ್ 3ರಂದು ಬೆಳಿಗ್ಗೆ 7:30 ರಿಂದ ಬೆಳಿಗ್ಗೆ 9:00 ರವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತದೆ. ಬೆಳಿಗ್ಗೆ 9:00 ಗಂಟೆಗೆ ಮಹಾ ಪೂಜೆ ನಡೆಯಲಿದ್ದು, ತದನಂತರ ದೇವಾಲಯವನ್ನು ಗ್ರಹಣ ಪ್ರಯುಕ್ತ ಮುಚ್ಚಲಾಗುವುದು. ಸಂಜೆ 6:48ರ ಗ್ರಹಣ ಮೋಕ್ಷದ ನಂತರ ದೇವಾಲಯವನ್ನು ತೆರೆಯಲಾಗುವುದು. (ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ) ರಾತ್ರಿ 8 ಗಂಟೆಗೆ ಮಹಾಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳಲು ಅವಕಾಶವಿದೆ. ನಂತರ ದೇವಾಲಯ ಮುಚ್ಚಲಾಗುತ್ತದೆ.
ಈ ಕುರಿತು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…