ಕೊಡಗು

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ ಗ್ರಾಮದ ಇಬ್ಬರ ಮೃತದೇಹ ಪತ್ತೆಯಾಗಿದೆ.

ನೀರುಗುಂದ ಗ್ರಾಮದ ನಿವಾಸಿಗಳಾದ ಚನ್ನವೀರಯ್ಯ ಅವರ ಪುತ್ರ ಶಿವರಾಜ್(೫೧) ಮತ್ತು ಬಸವರಾಜು ಅವರ ಪುತ್ರ ನಾಗರಾಜು(೪೫) ಮೃತಪಟ್ಟವರು. ಇಬ್ಬರು ಗುರುವಾರ ರಾತ್ರಿ ವೇಳೆಯಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿದ್ದರು. ಮರುದಿನ ಬೆಳಗಾದರೂ ಇಬ್ಬರು ಮನೆಗೆ ಬಾರದ ಹಿನ್ನಲೆ ಅನುಮಾನಗೊಂಡ ಇಬ್ಬರ ಮನೆಯ ಪೋಷಕರು ಶುಕ್ರವಾರ ಬೆಳಗ್ಗೆ ಹೇಮಾವತಿ ನದಿ ಹತ್ತಿರ ಹೋಗಿ ಗಮನಿಸಿದಾಗ ಮೀನು ಹಿಡಿಯಲು ಬಳಸಿದ ಬಲೆ ಮತ್ತು ಶಿವರಾಜ್ ಅವರ ಚಪ್ಪಲಿಯೊಂದು ದಡದಲ್ಲಿ ಪತ್ತೆಯಾಗಿತ್ತು.

ಇಬ್ಬರು ನಾಪತ್ತೆಯಾಗಿರುವ ಕುರಿತು ಶನಿವಾರಸಂತೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಶುಕ್ರವಾರ ಮಧ್ಯಾಹ್ನದಿಂದ ಪೋಲಿಸರು, ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯನಡೆಸುತ್ತಿದ್ದರು. ಭಾನುವಾರ ಇಬ್ಬರ ಮೃತದೇಹ ಪತ್ತೆಯಾಗಿದೆ.

ಭಾನುವಾರ ಬೆಳಗ್ಗೆ ಎನ್‌ಆರ್‌ಎಫ್ ಪಡೆ, ಅಗ್ನಿಶಾಮಕ ದಳ ಹೇಮಾವತಿ ಹಿನ್ನೀರಿನಲ್ಲಿ ಶೋಧ ಕಾರ್ಯಚರಣೆ ಮುಂದುವರೆಸಿದ್ದರು. ಬೆಳಗ್ಗೆ ೯ ಗಂಟೆಗೆ ಇಬ್ಬರು ನಾಪತ್ತೆಯಾಗಿದ್ದ ಸ್ಥಳದಿಂದ ೧ ಕಿ.ಮೀ. ದೂರದಲ್ಲಿರುವ ಜನಾರ್ಧನಹಳ್ಳಿ ಗ್ರಾಮದ ಹಿನ್ನೀರಿನ ದಡದಲ್ಲಿ ನಾಗರಾಜ್ ಅವರ ಶವ ಪತ್ತೆಯಾಗಿದೆ. ಮತ್ತೆ ಮುಂದುವರೆದ ಕಾರ್ಯಾಚರಣೆಯಲ್ಲಿ ನಾಗರಾಜ್ ಶವ ದೊರೆತ ಸ್ವಲ್ಪ ದೂರದಲ್ಲಿ ಶಿವರಾಜ್ ಅವರ ಶವ ಪತ್ತೆಯಾಗಿದೆ.

ಘಟನೆಗೆ ಸಬಂಧಿಸಿದಂತೆ ಸ್ಥಳಕ್ಕೆ ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಇಬ್ಬರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಶಾಸಕ ಡಾ.ಮಂಥರ್ ಗೌಡ ಅವರ ಸೂಚನೆ ಮೇರೆಗೆ ವೈದ್ಯರು ಶಿವರಾಜ್ ಮತ್ತು ನಾಗರಾಜ್ ಅವರುಗಳ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನೀರುಗುಂದ ಗ್ರಾಮದ ಸ್ಮಶಾನದಲ್ಲಿ ನಡೆಸಿದರು. ನಂತರ ಇಬ್ಬರ ಅಂತ್ಯಕ್ರಿಯೆಯನ್ನು ಅಲ್ಲಿಯೇ ನೇರವೇರಿಸಲಾಯಿತು.

ಸ್ಥಳಕ್ಕೆ ಶನಿವಾರಸಂತೆ ಪೋಲಿಸ್ ಠಾಣಾಧಿಕಾರಿ ಚಂದ್ರು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

22 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago