ಕೊಡಗು

ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಬಾಲಕ ಮೃತ್ಯು

ಮಡಿಕೇರಿ : ಏಡಿ ಹಿಡಿಯಲು ತೆರಳಿದ್ದ ಬಾಲಕನೊಬ್ಬ ಹಾರಂಗಿ ಎಡದಂಡೆ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ.

ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ದಿಡ್ಡಳ್ಳಿ ಪುನರ್ವಸತಿ ಕೇಂದ್ರದ ನಿವಾಸಿ ಅಣ್ಣಪ್ಪ ಎಂಬುವವರ ಪುತ್ರ ಮದಲಾಪುರ ಬಳಿಯ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಅನಿತ್ (14) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.

ತನ್ನ ಗೆಳೆಯರೊಂದಿಗೆ ಹಾರಂಗಿ ಮುಖ್ಯ ನಾಲೆಯ ರಸ್ತೆಯ ಮೂಲಕ ಶಾಲೆಗೆ ಹೋಗುವ ಸಂದರ್ಭ, ಅನಿತ್ ತುಂಬಿ ಹರಿಯುತ್ತಿದ್ದ ನಾಲೆಯ ಬದಿಯಲ್ಲಿ ಕಂಡ ಏಡಿಯನ್ನು ಹಿಡಿಯಲು ಪ್ರಯತ್ನಿಸಿದ್ದಾನೆ. ಈ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದು ಸಾವನ್ನಪ್ಪಿದ್ದಾನೆ. ಆತನ ಸಹಪಾಠಿ ಅನಿತ್ ನನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಫಲಕಾರಿಯಾಗಲಿಲ್ಲ ಎಂದು ಹೇಳಲಾಗಿದೆ.

ಬಾಲಕ ನೀರಿನಲ್ಲಿ ಮುಳುಗಿರುವ ವಿಷಯ ತಿಳಿದು ಹಾರಂಗಿಯ ನೀರಾವರಿ ಇಲಾಖೆಯ ಅಧಿಕಾರಿಗಳು ಒಂದು ಗಂಟೆ ಕಾಲ ನಾಲೆಯ ನೀರನ್ನು ಸ್ಥಗಿತಗೊಳಿಸಿ, ಶೋಧ ಕಾರ್ಯಕ್ಕೆ ಅನುವು ಮಾಡಿಕೊಟ್ಟರು. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸುಮಾರು ನೂರು ಮೀಟರ್ ದೂರದಲ್ಲಿದ್ದ ಬಾಲಕನ ಮೃತದೇಹ ಪತ್ತೆ ಹಚ್ಚಿ ಹೊರ ತೆಗೆಯುವಲ್ಲಿ ಯಶಸ್ವಿಯಾದರು.

 ಶಾಸಕರ ಭೇಟಿ

ಘಟನಾ ಸ್ಥಳಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಶವಸಂಸ್ಕಾರಕ್ಕೆಂದು ಬಡ ಕುಟುಂಬಕ್ಕೆ ವೈಯಕ್ತಿಕ ಸಹಾಯಧನ ನೀಡಿದರು. ಪÀರಿಹಾರ ಒದಗಿಸುವಂತೆ ನೀರಾವರಿ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

andolanait

Recent Posts

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

45 mins ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

1 hour ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

1 hour ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

2 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

3 hours ago