ಕೊಡಗು

ಶೌಚ ಗುಂಡಿಗೆ ಬಿದ್ದ ಗೂಳಿ: ಅಗ್ನಿಶಾಮಕ ದಳದಿಂದ ರಕ್ಷಣೆ

ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ದಸರಾ ಸಂದರ್ಭ ತೆಗೆಯಲಾಗಿದ್ದ ಶೌಚ ಗುಂಡಿಗೆ ಗೂಳಿಯೊಂದು ಬಿದ್ದು ಮೇಲೆ ಬರಲಾಗದೆ ಪರದಾಡಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗೂಳಿಯನ್ನು ರಕ್ಷಿಸಿದ್ದಾರೆ.

ನಗರದ ಖಾಸಗಿ ಶಾಲೆಯ ಮುಂಭಾಗದ ಗಾಂಧಿ ಮೈದಾನದಲ್ಲಿ ದಸರಾ ವೇಳೆಯಲ್ಲಿ ಶೌಚಗುಂಡಿಯನ್ನು ತೆರೆದು ಹಾಗೆಯೆ ಬಿಡಲಾಗಿತ್ತು. ಜಾನುವಾರುಗಳು ಮೈದಾನಕ್ಕೆ ಬಂದ ಸಂದರ್ಭ ಗೂಳಿಯೊಂದು ಗುಂಡಿಯೊಳಕ್ಕೆ ಬಿದ್ದಿದೆ. ಬೃಹತ್ ಹೊಂಡವಾಗಿರುವುದರಿಂದ ಗೂಳಿಯು ಮೇಲೆ ಬರಲು ಸಾಧ್ಯವಾಗದೆ ಪರದಾಡಿದೆ. ಕೊಡಗು ಅಭಿವೃದ್ಧಿ ಸಮಿತಿ ಸದಸ್ಯ ಪ್ರಮೋದ್ ಎಂಬುವವರು ಇದನ್ನು ಗಮನಿಸಿ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗೂಳಿಯನ್ನು ರಕ್ಷಿಸಿದ್ದಾರೆ. ಇದೇ ಮೈದಾನದಲ್ಲಿ ಶಾಲಾ ಮಕ್ಕಳು ಆಟವಾಡುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ಗುಂಡಿಯನ್ನು ಮುಚ್ಚುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

6 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

6 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

8 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

8 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

9 hours ago