ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ದಸರಾ ಸಂದರ್ಭ ತೆಗೆಯಲಾಗಿದ್ದ ಶೌಚ ಗುಂಡಿಗೆ ಗೂಳಿಯೊಂದು ಬಿದ್ದು ಮೇಲೆ ಬರಲಾಗದೆ ಪರದಾಡಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗೂಳಿಯನ್ನು ರಕ್ಷಿಸಿದ್ದಾರೆ.
ನಗರದ ಖಾಸಗಿ ಶಾಲೆಯ ಮುಂಭಾಗದ ಗಾಂಧಿ ಮೈದಾನದಲ್ಲಿ ದಸರಾ ವೇಳೆಯಲ್ಲಿ ಶೌಚಗುಂಡಿಯನ್ನು ತೆರೆದು ಹಾಗೆಯೆ ಬಿಡಲಾಗಿತ್ತು. ಜಾನುವಾರುಗಳು ಮೈದಾನಕ್ಕೆ ಬಂದ ಸಂದರ್ಭ ಗೂಳಿಯೊಂದು ಗುಂಡಿಯೊಳಕ್ಕೆ ಬಿದ್ದಿದೆ. ಬೃಹತ್ ಹೊಂಡವಾಗಿರುವುದರಿಂದ ಗೂಳಿಯು ಮೇಲೆ ಬರಲು ಸಾಧ್ಯವಾಗದೆ ಪರದಾಡಿದೆ. ಕೊಡಗು ಅಭಿವೃದ್ಧಿ ಸಮಿತಿ ಸದಸ್ಯ ಪ್ರಮೋದ್ ಎಂಬುವವರು ಇದನ್ನು ಗಮನಿಸಿ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗೂಳಿಯನ್ನು ರಕ್ಷಿಸಿದ್ದಾರೆ. ಇದೇ ಮೈದಾನದಲ್ಲಿ ಶಾಲಾ ಮಕ್ಕಳು ಆಟವಾಡುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ಗುಂಡಿಯನ್ನು ಮುಚ್ಚುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…