ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ದಸರಾ ಸಂದರ್ಭ ತೆಗೆಯಲಾಗಿದ್ದ ಶೌಚ ಗುಂಡಿಗೆ ಗೂಳಿಯೊಂದು ಬಿದ್ದು ಮೇಲೆ ಬರಲಾಗದೆ ಪರದಾಡಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗೂಳಿಯನ್ನು ರಕ್ಷಿಸಿದ್ದಾರೆ.
ನಗರದ ಖಾಸಗಿ ಶಾಲೆಯ ಮುಂಭಾಗದ ಗಾಂಧಿ ಮೈದಾನದಲ್ಲಿ ದಸರಾ ವೇಳೆಯಲ್ಲಿ ಶೌಚಗುಂಡಿಯನ್ನು ತೆರೆದು ಹಾಗೆಯೆ ಬಿಡಲಾಗಿತ್ತು. ಜಾನುವಾರುಗಳು ಮೈದಾನಕ್ಕೆ ಬಂದ ಸಂದರ್ಭ ಗೂಳಿಯೊಂದು ಗುಂಡಿಯೊಳಕ್ಕೆ ಬಿದ್ದಿದೆ. ಬೃಹತ್ ಹೊಂಡವಾಗಿರುವುದರಿಂದ ಗೂಳಿಯು ಮೇಲೆ ಬರಲು ಸಾಧ್ಯವಾಗದೆ ಪರದಾಡಿದೆ. ಕೊಡಗು ಅಭಿವೃದ್ಧಿ ಸಮಿತಿ ಸದಸ್ಯ ಪ್ರಮೋದ್ ಎಂಬುವವರು ಇದನ್ನು ಗಮನಿಸಿ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಗೂಳಿಯನ್ನು ರಕ್ಷಿಸಿದ್ದಾರೆ. ಇದೇ ಮೈದಾನದಲ್ಲಿ ಶಾಲಾ ಮಕ್ಕಳು ಆಟವಾಡುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ಗುಂಡಿಯನ್ನು ಮುಚ್ಚುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…