ಕೊಡಗು

ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

ವಿರಾಜಪೇಟೆ: ಹೆದ್ದಾರಿಯಲ್ಲಿ ಗುಂಡಿಯನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಗೋಣಿಕೊಪ್ಪ ಹೆದ್ದಾರಿಯಲ್ಲಿ ನಡೆದಿದೆ.

ಮೈಸೂರಿನಿಂದ ವಿರಾಜಪೇಟೆಗೆ ಹೊರಟಿದ್ದ ಬಸ್‌ ಇದಾಗಿದ್ದು, ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಸೀಟ್‌ ಮತ್ತು ಸ್ಟೇರಿಂಗ್ ಮಧ್ಯೆ ಸಿಲುಕಿಕೊಂಡಿದ್ದ ಚಾಲಕನನ್ನು ಹೊರಕ್ಕೆ ತಂದಿದ್ದಾರೆ.

ಇಂದು ರಾತ್ರಿ 8.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಗೋಣಿಕೊಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

23 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

1 hour ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

2 hours ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

3 hours ago