ಕೊಡಗು

ವೈವಿಧ್ಯತೆಯ ಮೇಳ : ಗಮನ ಸೆಳೆದ ಬಟರ್‌ ಫ್ರೂಟ್‌

ಚೆಟ್ಟಳ್ಳಿ : ಇಲ್ಲಿನ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು.

ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗೂ ಕೇಂದ್ರದ ಸಂಶೋಧಿತ ತಳಿಗಳಾದ ಅರ್ಕಾ ಸುಪ್ರೀಂ, ಅರ್ಕಾ ಕೂರ್ಗ್ ರವಿ ಹಾಗೂ ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ, ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್, ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು.

ಪ್ರಗತಿಪರ ಬೆಳೆಗಾರ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗಿನವರು ಕಾಫಿ, ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿಕೊಂಡಿದ್ದರು. ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ ಒತ್ತು ನೀಡಿದಿದ್ದರೆ ಕಿತ್ತಳೆ ಬೆಳೆಯನ್ನು ಅಭಿವೃದ್ಧಿಪಡಿಸಬಹುದು ಎಂದರು.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಆರ್.ದಿನೇಶ್ ಮಾತನಾಡಿದರು. ನಿರ್ದೇಶಕ ಡಾ.ಪ್ರಕಾಶ್ ಪಾಟೀಲ್, ಕೆ.ಎ.ಚಿಣ್ಣಪ್ಪ ಹಾಜರಿದ್ದರು. ಬೆಣ್ಣೆಹಣ್ಣಿನ ವಿವಿಧ ತಳಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

9 mins ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

12 mins ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

14 mins ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

16 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

19 mins ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

25 mins ago