ಚೆಟ್ಟಳ್ಳಿ : ಇಲ್ಲಿನ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು.
ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗೂ ಕೇಂದ್ರದ ಸಂಶೋಧಿತ ತಳಿಗಳಾದ ಅರ್ಕಾ ಸುಪ್ರೀಂ, ಅರ್ಕಾ ಕೂರ್ಗ್ ರವಿ ಹಾಗೂ ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ, ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್, ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು.
ಪ್ರಗತಿಪರ ಬೆಳೆಗಾರ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗಿನವರು ಕಾಫಿ, ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿಕೊಂಡಿದ್ದರು. ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ ಒತ್ತು ನೀಡಿದಿದ್ದರೆ ಕಿತ್ತಳೆ ಬೆಳೆಯನ್ನು ಅಭಿವೃದ್ಧಿಪಡಿಸಬಹುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಆರ್.ದಿನೇಶ್ ಮಾತನಾಡಿದರು. ನಿರ್ದೇಶಕ ಡಾ.ಪ್ರಕಾಶ್ ಪಾಟೀಲ್, ಕೆ.ಎ.ಚಿಣ್ಣಪ್ಪ ಹಾಜರಿದ್ದರು. ಬೆಣ್ಣೆಹಣ್ಣಿನ ವಿವಿಧ ತಳಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ…
ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ…