ಚೆಟ್ಟಳ್ಳಿ : ಇಲ್ಲಿನ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು.
ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗೂ ಕೇಂದ್ರದ ಸಂಶೋಧಿತ ತಳಿಗಳಾದ ಅರ್ಕಾ ಸುಪ್ರೀಂ, ಅರ್ಕಾ ಕೂರ್ಗ್ ರವಿ ಹಾಗೂ ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ, ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್, ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು.
ಪ್ರಗತಿಪರ ಬೆಳೆಗಾರ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೊಡಗಿನವರು ಕಾಫಿ, ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿಕೊಂಡಿದ್ದರು. ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ ಒತ್ತು ನೀಡಿದಿದ್ದರೆ ಕಿತ್ತಳೆ ಬೆಳೆಯನ್ನು ಅಭಿವೃದ್ಧಿಪಡಿಸಬಹುದು ಎಂದರು.
ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಆರ್.ದಿನೇಶ್ ಮಾತನಾಡಿದರು. ನಿರ್ದೇಶಕ ಡಾ.ಪ್ರಕಾಶ್ ಪಾಟೀಲ್, ಕೆ.ಎ.ಚಿಣ್ಣಪ್ಪ ಹಾಜರಿದ್ದರು. ಬೆಣ್ಣೆಹಣ್ಣಿನ ವಿವಿಧ ತಳಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…