ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ.
ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ ಒಳಗೆ ಎಳೆದೊಯ್ದಿದೆ. ಮಾಲೀಕ ಪೂವಯ್ಯ ಕರುವನ್ನು ಹುಡುಕತೊಡಗಿದಾಗ ಬುಧವಾರ ಬೆಳಿಗ್ಗೆ ಕಾಫಿ ತೋಟದಲ್ಲಿ ಕರು ಸತ್ತು ಬಿದ್ದಿರುವುದು ಗೋಚರಿಸಿದೆ.
ಹುಲಿಯ ಚಲನವಲನವನ್ನು ಕಂಡು ಹಿಡಿಯಲು ಸ್ಥಳದಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಕುಟ್ಟ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಕುಟ್ಟ ಪಶುವೈಧ್ಯಾಧಿಕಾರಿ ಗಿರೀಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಪೊನ್ನಂಪೇಟೆ ಡಿಆರ್ಎಫ್ಒ ದಿವಾಕರ್, ಗುರುನಾಥ್, ಆರ್ಆರ್ಟಿ ತಂಡದ ರಂಜು, ಹರೀಶ್, ರಂಜಿತ್, ಸಂಜಯ್, ವಿನು, ಭವನ್, ಸುಬ್ರಮಣಿ ಪಾಲ್ಗೊಂಡಿದ್ದರು.
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್ನ ಬಿಎಂಟಿಸಿ ಡಿಪೋ ಬಳಿ ಇಂದು…
ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್…
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…