ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ.
ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ ಒಳಗೆ ಎಳೆದೊಯ್ದಿದೆ. ಮಾಲೀಕ ಪೂವಯ್ಯ ಕರುವನ್ನು ಹುಡುಕತೊಡಗಿದಾಗ ಬುಧವಾರ ಬೆಳಿಗ್ಗೆ ಕಾಫಿ ತೋಟದಲ್ಲಿ ಕರು ಸತ್ತು ಬಿದ್ದಿರುವುದು ಗೋಚರಿಸಿದೆ.
ಹುಲಿಯ ಚಲನವಲನವನ್ನು ಕಂಡು ಹಿಡಿಯಲು ಸ್ಥಳದಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಕುಟ್ಟ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಕುಟ್ಟ ಪಶುವೈಧ್ಯಾಧಿಕಾರಿ ಗಿರೀಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಪೊನ್ನಂಪೇಟೆ ಡಿಆರ್ಎಫ್ಒ ದಿವಾಕರ್, ಗುರುನಾಥ್, ಆರ್ಆರ್ಟಿ ತಂಡದ ರಂಜು, ಹರೀಶ್, ರಂಜಿತ್, ಸಂಜಯ್, ವಿನು, ಭವನ್, ಸುಬ್ರಮಣಿ ಪಾಲ್ಗೊಂಡಿದ್ದರು.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…