ಕೊಡಗು

ಗೋಣಿಕೊಪ್ಪಲು: ಹುಲಿ ದಾಳಿಗೆ ಕರು ಬಲಿ

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ.

ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ ಸೇರಿದ 2 ವರ್ಷದ ಕರು ಬಲಿಯಾದದ್ದು. ಹುಲಿ ಕರುವನ್ನು ಕೊಂದು ಕಾಫಿ ತೋಟದ ಒಳಗೆ ಎಳೆದೊಯ್ದಿದೆ. ಮಾಲೀಕ ಪೂವಯ್ಯ ಕರುವನ್ನು ಹುಡುಕತೊಡಗಿದಾಗ ಬುಧವಾರ ಬೆಳಿಗ್ಗೆ ಕಾಫಿ ತೋಟದಲ್ಲಿ ಕರು ಸತ್ತು ಬಿದ್ದಿರುವುದು ಗೋಚರಿಸಿದೆ.

ಹುಲಿಯ ಚಲನವಲನವನ್ನು ಕಂಡು ಹಿಡಿಯಲು ಸ್ಥಳದಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಕುಟ್ಟ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್‌ ತಿಳಿಸಿದ್ದಾರೆ.

ಕುಟ್ಟ ಪಶುವೈಧ್ಯಾಧಿಕಾರಿ ಗಿರೀಶ್‌ ಮರಣೋತ್ತರ ಪರೀಕ್ಷೆ ನಡೆಸಿದರು. ಪೊನ್ನಂಪೇಟೆ ಡಿಆರ್‌ಎಫ್‌ಒ ದಿವಾಕರ್‌, ಗುರುನಾಥ್‌, ಆರ್‌ಆರ್‌ಟಿ ತಂಡದ ರಂಜು, ಹರೀಶ್‌, ರಂಜಿತ್‌, ಸಂಜಯ್‌, ವಿನು, ಭವನ್‌, ಸುಬ್ರಮಣಿ ಪಾಲ್ಗೊಂಡಿದ್ದರು.

andolana

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

7 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

7 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

9 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

9 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

11 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

12 hours ago