ಕೊಡಗು

ಕಾರು ಗುದ್ದಿ ಕರು ಸಾವು; ಸ್ಥಳೀಯರಿಂದ ಕ್ರಮಕ್ಕೆ ಒತ್ತಾಯ

ಮಡಿಕೇರಿ : ರಸ್ತೆ ಮಧ್ಯೆ ನಿಂತಿದ್ದ  ಕರುವಿಗೆ ವೇಗವಾಗಿ ಬಂದ ಇನ್ನೋವಾ ಕಾರು ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಕರು ಉಸಿರುಚೆಲ್ಲಿದೆ.

ಭಾನುವಾರ ರಾತ್ರಿ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ಕಲ್ಲುಕೋರೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಈ ಅನಾಹುತಕ್ಕೆ ಕಾರಣವಾದ ಕಾರಿಗೂ ಹಾನಿ ಉಂಟಾಗಿದೆ.

ಕ್ರಮಕ್ಕೆ ಒತ್ತಾಯ: 7ನೇ ಹೊಸಕೋಟೆ ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ಮತ್ತು ಕಲ್ಲುಕೋರೆ ಜಂಕ್ಷನ್ ನಲ್ಲಿ ಜಾನುವಾರುಗಳು ಹಿಂಡಾಗಿ ಕೂಡಿರುತ್ತವೆ. ಇವುಗಳಿಂದಾಗಿ ಹೆದ್ದಾರಿಯಲ್ಲಿ ನಿರಂತರವಾಗಿ ಪ್ರಯಾಣಿಸುವ ವಾಹನಗಳ ಸಂಚಾರಕ್ಕೂ ತೊಡಕ್ಕಾಗುತ್ತಿದೆ. ಕೆಲವು ಹಸುಗಳು ವಾಹನಗಳಿಗೆ ಸಿಲುಕಿ ಜೀವ ಕಳೆದುಕೊಳ್ಳುತ್ತಿವೆ.

ಹೀಗಾಗಿ ಹಸುಗಳನ್ನು ಕೊಟ್ಟಿಗೆಯಲ್ಲಿ ಸಾಕದೆ ರಸ್ತೆಗೆ ಬಿಟ್ಟು ಅವುಗಳ ಸಾವಿಗೆ ಕಾರಣರಾಗುತ್ತಿರುವ ಮಾಲೀಕರ ವಿರುದ್ಧ ಕ್ರಮಕೈಗೊಂಡು ಬೀಡಾಡಿ ದನಗಳನ್ನು ಹಿಡಿದು ದೊಡ್ಡಿಗೆ ಸೇರಿಸುವಂತೆ ಸ್ಥಳೀಯರು ಅಲ್ಲಿನ ಗ್ರಾಮ ಪಂಚಾಯಿತಿಯನ್ನು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

1 hour ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

1 hour ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

2 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

3 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

4 hours ago