ಕೊಡಗು

ಚಾಲಕನ‌ ನಿಯಂತ್ರಣ ತಪ್ಪಿ ಮನೆಯಂಗಳದಲ್ಲಿ ಉರುಳಿ ಬಿದ್ದ ಕಾರು

ಗೋಣಿಕೊಪ್ಪ: ಕೊಡಗಿಗೆ ಪ್ರವಾಸಕ್ಕೆ ಬಂದ  ಪ್ರವಾಸಿಗರ ಕಾರು ಚಾಲಕನ ನಿಯಂತ್ರಣ ತಪ್ಪಿ  ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ಶನಿವಾರ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಹುದಿಕೇರಿ ಮಾರ್ಗವಾಗಿ ಸಂಚರಿಸಿ ಇರ್ಪುಫಾಲ್ಸ್ ಸೌಂದರ್ಯವನ್ನು ಸವಿದು ಕೇರಳದ  ವೈನಾಡಿಗೆ ಪ್ರವಾಸ  ಯಾತ್ರೆ ರೂಪಿಸಿಕೊಂಡು  ಕಾರಿನಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹುದಿಕೇರಿಯ ಗ್ರಾಮದ ಸೆವೆನ್ತ್ ಮೈಲ್‌ನ  ಮಲ್ಲಂಡ ಯತೀಶ್ ಅವರ ಮನೆಯ ಅಂಗಳಕ್ಕೆ ಕಾರು ಮಗುಚಿಕೊಂಡಿದೆ.
ಕಾರಿನಲ್ಲಿ ಮೂರು ಯುವಕರು ಮತ್ತು ಮಹಿಳೆ ಸರಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಸಣ್ಣಪುಟ್ಟ ಗಾಯಗಳಿಂದ ಪ್ರವಾಸಿಗರು ಪಾರಾಗಿದ್ದಾರೆ. ಮಲ್ಲಂಡ ಯತೀಶ್ ಅವರ ಮನೆಯ ಗೋಡೆ ಕಾರು ಅಪ್ಪಳಿಸಿದ  ರಭಸಕ್ಕೆ ಬಿರುಕು ಬಿಟ್ಟಿದೆ.
ಸ್ಥಳೀಯ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.
ಹುದಿಕೇರಿ ಸೆವೆನ್ತ್ ಮೈಲ್‌ನಲ್ಲಿ ಮಲ್ಲಂಡ ಯತೀಶ್ ಅವರ ಮನೆ ಇದ್ದು, ರಸ್ತೆ ತಿರುವು ಇರುವುದರಿಂದ ವಾಹನಗಳು ನಿಯಂತ್ರಣ ಕಳೆದುಕೊಂಡು ಮನೆಯಂಗಳಕ್ಕೆ ನುಗ್ಗುವ ಅಪಾಯಕಾರಿ ಸದಾ ಎದುರಾಗುತ್ತಿರುತ್ತದೆ. ಹೀಗಾಗಿ, ಈ ಭಾಗದಲ್ಲಿ ಬ್ಯಾರಿಕೆಟ್ ಅಳವಡಿಸಲು ಹಲವು ಬಾರಿ ಪಂಚಾಯಿತಿಗೆ ಮನವಿ ಮಾಡಿದರು ಸ್ಪಂದಿಸಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

5 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

6 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

6 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

6 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago