ಕೊಡಗು

ಚಾಲಕನ‌ ನಿಯಂತ್ರಣ ತಪ್ಪಿ ಮನೆಯಂಗಳದಲ್ಲಿ ಉರುಳಿ ಬಿದ್ದ ಕಾರು

ಗೋಣಿಕೊಪ್ಪ: ಕೊಡಗಿಗೆ ಪ್ರವಾಸಕ್ಕೆ ಬಂದ  ಪ್ರವಾಸಿಗರ ಕಾರು ಚಾಲಕನ ನಿಯಂತ್ರಣ ತಪ್ಪಿ  ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ಶನಿವಾರ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಹುದಿಕೇರಿ ಮಾರ್ಗವಾಗಿ ಸಂಚರಿಸಿ ಇರ್ಪುಫಾಲ್ಸ್ ಸೌಂದರ್ಯವನ್ನು ಸವಿದು ಕೇರಳದ  ವೈನಾಡಿಗೆ ಪ್ರವಾಸ  ಯಾತ್ರೆ ರೂಪಿಸಿಕೊಂಡು  ಕಾರಿನಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹುದಿಕೇರಿಯ ಗ್ರಾಮದ ಸೆವೆನ್ತ್ ಮೈಲ್‌ನ  ಮಲ್ಲಂಡ ಯತೀಶ್ ಅವರ ಮನೆಯ ಅಂಗಳಕ್ಕೆ ಕಾರು ಮಗುಚಿಕೊಂಡಿದೆ.
ಕಾರಿನಲ್ಲಿ ಮೂರು ಯುವಕರು ಮತ್ತು ಮಹಿಳೆ ಸರಿ ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಸಣ್ಣಪುಟ್ಟ ಗಾಯಗಳಿಂದ ಪ್ರವಾಸಿಗರು ಪಾರಾಗಿದ್ದಾರೆ. ಮಲ್ಲಂಡ ಯತೀಶ್ ಅವರ ಮನೆಯ ಗೋಡೆ ಕಾರು ಅಪ್ಪಳಿಸಿದ  ರಭಸಕ್ಕೆ ಬಿರುಕು ಬಿಟ್ಟಿದೆ.
ಸ್ಥಳೀಯ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.
ಹುದಿಕೇರಿ ಸೆವೆನ್ತ್ ಮೈಲ್‌ನಲ್ಲಿ ಮಲ್ಲಂಡ ಯತೀಶ್ ಅವರ ಮನೆ ಇದ್ದು, ರಸ್ತೆ ತಿರುವು ಇರುವುದರಿಂದ ವಾಹನಗಳು ನಿಯಂತ್ರಣ ಕಳೆದುಕೊಂಡು ಮನೆಯಂಗಳಕ್ಕೆ ನುಗ್ಗುವ ಅಪಾಯಕಾರಿ ಸದಾ ಎದುರಾಗುತ್ತಿರುತ್ತದೆ. ಹೀಗಾಗಿ, ಈ ಭಾಗದಲ್ಲಿ ಬ್ಯಾರಿಕೆಟ್ ಅಳವಡಿಸಲು ಹಲವು ಬಾರಿ ಪಂಚಾಯಿತಿಗೆ ಮನವಿ ಮಾಡಿದರು ಸ್ಪಂದಿಸಲಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಆಂದೋಲನ ಡೆಸ್ಕ್

Recent Posts

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

26 mins ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

1 hour ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

3 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

4 hours ago

ಚಾಮರಾಜನಗರ ಅರಣ್ಯ ವಲಯದಲ್ಲಿ ಹೆಚ್ಚಿದ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ. ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು…

6 hours ago

ಹುಲಿ ನೋಡಲು ತೆರಳಿದ್ದ ಸಫಾರಿ ವಾಹನ ಅಪಘಾತ: 25 ಪ್ರವಾಸಿಗರಿಗೆ ಗಾಯ

ಎಚ್‌.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…

7 hours ago