ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ.
ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ ಕರುವೊಂದು ಅಡ್ಡಾಡುತ್ತಿತ್ತು. ಈ ಸಂದರ್ಭ ಬೆಂಗಳೂರಿನ ಪ್ರವಾಸಿ ಕಾರು ರಸ್ತೆಯಲ್ಲಿ ಓಡಾಡುತ್ತಿದ್ದ ಕರುವಿನ ಮೇಲೆ ಹರಿದಿತ್ತು. ಇದೇ ಸಮಯದಲ್ಲಿ ಅಲ್ಲೇ ಇದ್ದ ಗೂಡ್ಸ್ ವಾಹನ ಚಾಲಕರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಬಂದು ಕಾರನ್ನು ಮೇಲಕ್ಕೆ ಎತ್ತಿ ಕರುವನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಬಳಿಕ ಕರುವನ್ನು ಚಿಕಿತ್ಸೆಗಾಗಿ ಪಶು ಆಸ್ಪತ್ರೆಗೆ ಸಾಗಿಸಲಾಯಿತು. ಇವರ ಈ ಮಾನವೀಯತೆಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…