ಕೊಡಗು

ಅರ್ಚಕರ ಮೇಲೆ ಹಲ್ಲೆ ಪ್ರಕರಣ; ಸಹಾಯ ಮಾಡಿದವರ ಬಂಧನ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. ಭೀಮಯ್ಯ(೩೮) ಬಂಧಿತ ಆರೋಪಿಗಳು.

ಜ.೨೭ರಂದು ಇಬ್ಬರು ಆರೋಪಿಗಳು ಅರ್ಚಕ ವಿಘ್ನೇಶ್ ಭಟ್ ಎಂಬವರ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ವಿಘ್ನೇಶ್ ಭಟ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಲವು ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ.

ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶಿವಪ್ಪ ಅವರು ಆರೋಪಿಗಳು ತಪ್ಪಿಸಿಕೊಳ್ಳಲು ತಮ್ಮ ಮಾರುತಿ ೮೦೦ ಕಾರನ್ನು ನೀಡಿದರೆ, ಬೋಳ್ಯಪಂಡ ಭೀಮಯ್ಯ ಅವರು ಆರೋಪಿಗಳು ಕೃತ್ಯವೆಸಗಿ ತೆರಳಿದ ವಾಹನವನ್ನು ತಮ್ಮ ತೋಟದಲ್ಲಿ ಬಚ್ಚಿಡುವಲ್ಲಿ ಸಹಕಾರ ನೀಡಿದ್ದರು. ಆರೋಪಿಗಳಿಗೆ ಸಹಕಾರ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವ ಎಸ್‌ಪಿ ಕೆ ರಾಮರಾಜನ್, ಆರೋಪಿಗಳ ಸಂಬಂಧ ಮಾಹಿತಿ ದೊರೆತಲ್ಲಿ ೦೮೨೭೨-೨೨೮೩೩೦, ೯೪೮೦೮೦೪೯೦೦ ಸಂಖ್ಯೆಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

4 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

5 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

5 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

5 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

5 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

5 hours ago