ಕೊಡಗು

ಅರ್ಚಕರ ಮೇಲೆ ಹಲ್ಲೆ ಪ್ರಕರಣ; ಸಹಾಯ ಮಾಡಿದವರ ಬಂಧನ

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. ಭೀಮಯ್ಯ(೩೮) ಬಂಧಿತ ಆರೋಪಿಗಳು.

ಜ.೨೭ರಂದು ಇಬ್ಬರು ಆರೋಪಿಗಳು ಅರ್ಚಕ ವಿಘ್ನೇಶ್ ಭಟ್ ಎಂಬವರ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ವಿಘ್ನೇಶ್ ಭಟ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಲವು ಸಂಘಟನೆಗಳು ಖಂಡನೆ ವ್ಯಕ್ತಪಡಿಸಿವೆ.

ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಇಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶಿವಪ್ಪ ಅವರು ಆರೋಪಿಗಳು ತಪ್ಪಿಸಿಕೊಳ್ಳಲು ತಮ್ಮ ಮಾರುತಿ ೮೦೦ ಕಾರನ್ನು ನೀಡಿದರೆ, ಬೋಳ್ಯಪಂಡ ಭೀಮಯ್ಯ ಅವರು ಆರೋಪಿಗಳು ಕೃತ್ಯವೆಸಗಿ ತೆರಳಿದ ವಾಹನವನ್ನು ತಮ್ಮ ತೋಟದಲ್ಲಿ ಬಚ್ಚಿಡುವಲ್ಲಿ ಸಹಕಾರ ನೀಡಿದ್ದರು. ಆರೋಪಿಗಳಿಗೆ ಸಹಕಾರ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವ ಎಸ್‌ಪಿ ಕೆ ರಾಮರಾಜನ್, ಆರೋಪಿಗಳ ಸಂಬಂಧ ಮಾಹಿತಿ ದೊರೆತಲ್ಲಿ ೦೮೨೭೨-೨೨೮೩೩೦, ೯೪೮೦೮೦೪೯೦೦ ಸಂಖ್ಯೆಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

35 seconds ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

8 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

14 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

19 mins ago

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

23 hours ago