Mysore
24
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕಳೆದ ಕೆಲ ದಿನಗಳಿಂದ ವಿರಾಜಪೇಟೆ ಸಮೀಪದ ಸಿದ್ಧಾಪುರ ಬಳಿ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿದ್ದ 35 ವರ್ಷ ಪ್ರಾಯದ ಕಾಡಾನೆ ಸೆರೆಗೆ ಬೆಳ್ಳಗ್ಗೆ 6 ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹುಡುಕಾಟ ನಡೆಸಿದ್ದರು.

ಅಂತಿಮವಾಗಿ ಚೆನ್ನೈನ ಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಪತ್ತೆಯಾದ ಒಂಟಿ ಸಲಗವನ್ನು ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

 

 

 

Tags:
error: Content is protected !!