ಕೊಡಗು

ಸಂವಿಧಾನ ಬದಲಾಯಿಸುವುದು ಸಂವಿಧಾನ ವಿರೋಧಿ ಬಿಜೆಪಿ ಪರಿವಾರದ ಹುನ್ನಾರ: ಸಿದ್ದರಾಮಯ್ಯ ಎಚ್ಚರಿಕೆ

  • ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ
  • ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು

ಮಡಿಕೇರಿ : ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಎಚ್ಚರಿಸಿದರು.

ಆರ್‌ಎಸ್‌ಎಸ್‌ ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ?

ಆರ್‌ಎಸ್‌ಎಸ್‌ ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇವರು ದೇಶಭಕ್ತರಾಗಲು ಸಾಧ್ಯವೇ ಇಲ್ಲ ಎಂದರು.

ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲಿ ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರಿಸಿದ ಮಾತುಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಸಮಾಜದಲ್ಲಿನ ಎಲ್ಲಾ ಜಾತಿ, ವರ್ಗ ಮತ್ತು ಧರ್ಮದ ಬಡವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವುದಕ್ಕಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ ಎಂದರು.

ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ ಎಂದು ಸಿದ್ದರಾಮಯ್ಯ ಅವರು ಸಾರ್ವಜನಿಕರಿಗೆ ಕರೆ ಕೊಟ್ಟರು.

ಭಾರತೀಯರನ್ನು ನಂಬಿಸಿ, ಭ್ರಮೆ ಹುಟ್ಟಿಸಿ , ಭಾವನೆಗಳನ್ನು ಕೆರಳಿಸಿ ಭಯಾನಕವಾಗಿ ವಂಚಿಸುವವರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ನುಡಿದಂತೆ ನಡೆದು ರಾಜ್ಯದ ಜನರ ಬದುಕಿಗೆ ಸ್ಪಂದಿಸಿದ ನಮಗೆ ಮತ ಹಾಕಿದರೆ ಆ ಮತಕ್ಕೆ ಗೌರವ ಬರುತ್ತದಾ? ಕೊಡಗು ಜಿಲ್ಲೆಯ ಮತದಾರರು ಪ್ರಜ್ಞಾವಂತರಾಗಿದ್ದಾರೆ. ತೋಚಿಸಿ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.

ಕೊಡಗಿನ ಶಾಸಕರಾದ ಪೊನ್ನಣ್ಣ ಮತ್ತು ಮಂಥರ್ ಗೌಡ ಅವರು ಕ್ಷೇತ್ರದ ಅಭಿವೃದ್ಧಿಗೆ ಏನೇನು ಕೇಳ್ತಾರೋ ಅದೆಲ್ಲವನ್ನೂ ಕೊಡಲು ಸರ್ಕಾರ ಬದ್ದವಾಗಿದೆ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಮೆಹರೂಜ್ ಖಾನ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

29 mins ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

53 mins ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

1 hour ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

2 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

4 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

4 hours ago