ಕೊಡಗು

ಕೊಡಗಿನ ಇಬ್ಬರು ಉಪ ವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ

ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.

ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ ೨೦೦ಕ್ಕೂ ಹೆಚ್ಚು ಅರಣ್ಯ ಮೊಕದ್ದಮೆಗಳು, ೩೦ ಕ್ಕೂ ಹೆಚ್ಚು ವನ್ಯಜೀವಿ ಪ್ರಕರಣಗಳು ಹಾಗೂ ೫೦ಕ್ಕೂ ಹೆಚ್ಚು ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಅರಣ್ಯ ಕಾನೂನು ಬಗ್ಗೆ ತರಬೇತಿ ಶಾಲೆಯಲ್ಲಿ ಭೋಧನೆಯನ್ನು ಮಾಡಿರುತ್ತಾರೆ.

ಇವರು ಮೂಲತಃ ಬೆಳಗಾವಿ ಜಿಲ್ಲೆ, ಅಥಣಿಯವರಾಗಿದ್ದು ಕಳೆದ ೮ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಕಳೆದ ಕೆಲವು ವರ್ಷಗಳ ಕಾಲ ವಿರಾಜಪೇಟೆ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕುಶಾಲನಗರದ ಮೀನುಕೊಲ್ಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕುಶಾಲನಗರ ಗಂಧದಕೋಟಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದ ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್. ಗೌಡರ್ ಕೂಡ ಮುಖ್ಯ ಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಇಲಾಖೆಯಲ್ಲಿ ಮಾಡಿರುವ ಸಕ್ರಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

೧೨೦ ಉಪ ವಲಯ ಅರಣ್ಯಾಧಿಕಾರಿ ಹಾಗೂ ೪೫ ಅರಣ್ಯ ವೀಕ್ಷಕರಿಗೆ ವೃತ್ತಿ ಬುನಾದಿ ತರಬೇತಿಯಲ್ಲಿ ವನ್ಯಜೀವಿ ನಿರ್ವಹಣೆ, ಸಸ್ಯಶಾಸ್ತ್ರ, ಮಣ್ಣು ಶಾಸ್ತ್ರ, ಲೆಕ್ಕ ಪತ್ರ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಬೋಧನೆ ಮಾಡಿರುವುದು. ೧೦೦ ಕ್ಕೂ ಹೆಚ್ಚು ಬಗೆಯ ಸಸ್ಯ ಪ್ರಬೇಧ ಗುರುತಿಸುವ ಜ್ಞಾನ ಹೊಂದಿರುವುದು, ಪಕ್ಷಿ ಹಾಗೂ ಜೀವಿ ಸಂಕುಲದ ಬಗ್ಗೆ ಹೊಂದಿರುವ ಜ್ಞಾನವನ್ನು ಇಲಾಖೆ ಗುರುತಿಸಿ ಗೌರವಿಸುತ್ತಿದೆ.

ಮಾನವ ವನ್ಯ ಜೀವಿ ಸಂಘರ್ಷ, ಜೇನುಕೃಷಿ, ವನ್ಯಜೀವಿ ಕಾನೂನು, ಇಕ್ಟ್ ವಿಷಯದ ಬಗ್ಗೆ ತರಬೇತಿ, ಚಿಣ್ಣರ ವನ ದರ್ಶನ ಕಾರ್ಯಕ್ರಮ ಪೊನ್ನಂಪೇಟೆ ವಲಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲಾ ಕಾಲೇಜುಗಳ ಮಕ್ಕಳಿಗೆ ಮಾಡಿರುವ ಬೋಧನೆಯ ಸುಧೀರ್ಘ ಸೇವೆಗೆ ಐಶ್ವರ್ಯ ಗೌಡರ್ ಅವರಿಗೆ ಪ್ರಶಸ್ತಿ ಲಭಿಸಿದೆ.

ಮೂಲತಃ ಬಾಗಲಕೋಟ ಜಿಲ್ಲೆಯ ಇಳಕಲ್ ವಾಸಿಯಾಗಿರುವ ಇವರು, ಕಳೆದ ೮ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರ ಸಾಧನೆಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

10 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

15 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

22 hours ago