ಕೊಡಗು

ಕೊಡಗಿನ ಇಬ್ಬರು ಉಪ ವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ

ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.

ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ ೨೦೦ಕ್ಕೂ ಹೆಚ್ಚು ಅರಣ್ಯ ಮೊಕದ್ದಮೆಗಳು, ೩೦ ಕ್ಕೂ ಹೆಚ್ಚು ವನ್ಯಜೀವಿ ಪ್ರಕರಣಗಳು ಹಾಗೂ ೫೦ಕ್ಕೂ ಹೆಚ್ಚು ಉಚ್ಚ ನ್ಯಾಯಾಲಯದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ಅರಣ್ಯ ಕಾನೂನು ಬಗ್ಗೆ ತರಬೇತಿ ಶಾಲೆಯಲ್ಲಿ ಭೋಧನೆಯನ್ನು ಮಾಡಿರುತ್ತಾರೆ.

ಇವರು ಮೂಲತಃ ಬೆಳಗಾವಿ ಜಿಲ್ಲೆ, ಅಥಣಿಯವರಾಗಿದ್ದು ಕಳೆದ ೮ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಕಳೆದ ಕೆಲವು ವರ್ಷಗಳ ಕಾಲ ವಿರಾಜಪೇಟೆ ಉಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಕುಶಾಲನಗರದ ಮೀನುಕೊಲ್ಲಿ ವಲಯದಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕುಶಾಲನಗರ ಗಂಧದಕೋಟಿಯಲ್ಲಿರುವ ಅರಣ್ಯ ತರಬೇತಿ ಕೇಂದ್ರದ ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್. ಗೌಡರ್ ಕೂಡ ಮುಖ್ಯ ಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ಇಲಾಖೆಯಲ್ಲಿ ಮಾಡಿರುವ ಸಕ್ರಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

೧೨೦ ಉಪ ವಲಯ ಅರಣ್ಯಾಧಿಕಾರಿ ಹಾಗೂ ೪೫ ಅರಣ್ಯ ವೀಕ್ಷಕರಿಗೆ ವೃತ್ತಿ ಬುನಾದಿ ತರಬೇತಿಯಲ್ಲಿ ವನ್ಯಜೀವಿ ನಿರ್ವಹಣೆ, ಸಸ್ಯಶಾಸ್ತ್ರ, ಮಣ್ಣು ಶಾಸ್ತ್ರ, ಲೆಕ್ಕ ಪತ್ರ ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಬೋಧನೆ ಮಾಡಿರುವುದು. ೧೦೦ ಕ್ಕೂ ಹೆಚ್ಚು ಬಗೆಯ ಸಸ್ಯ ಪ್ರಬೇಧ ಗುರುತಿಸುವ ಜ್ಞಾನ ಹೊಂದಿರುವುದು, ಪಕ್ಷಿ ಹಾಗೂ ಜೀವಿ ಸಂಕುಲದ ಬಗ್ಗೆ ಹೊಂದಿರುವ ಜ್ಞಾನವನ್ನು ಇಲಾಖೆ ಗುರುತಿಸಿ ಗೌರವಿಸುತ್ತಿದೆ.

ಮಾನವ ವನ್ಯ ಜೀವಿ ಸಂಘರ್ಷ, ಜೇನುಕೃಷಿ, ವನ್ಯಜೀವಿ ಕಾನೂನು, ಇಕ್ಟ್ ವಿಷಯದ ಬಗ್ಗೆ ತರಬೇತಿ, ಚಿಣ್ಣರ ವನ ದರ್ಶನ ಕಾರ್ಯಕ್ರಮ ಪೊನ್ನಂಪೇಟೆ ವಲಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಶಾಲಾ ಕಾಲೇಜುಗಳ ಮಕ್ಕಳಿಗೆ ಮಾಡಿರುವ ಬೋಧನೆಯ ಸುಧೀರ್ಘ ಸೇವೆಗೆ ಐಶ್ವರ್ಯ ಗೌಡರ್ ಅವರಿಗೆ ಪ್ರಶಸ್ತಿ ಲಭಿಸಿದೆ.

ಮೂಲತಃ ಬಾಗಲಕೋಟ ಜಿಲ್ಲೆಯ ಇಳಕಲ್ ವಾಸಿಯಾಗಿರುವ ಇವರು, ಕಳೆದ ೮ ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರ ಸಾಧನೆಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

8 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

8 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

8 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

8 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

8 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago