ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ತಿಚ್ಚು, ಆಕಸ್ಮಿಕ ಅಗ್ನಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದೇವರಮನೆ ಸೇರಿದಂತೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಸಸ್ಯ ಸಂಪತ್ತು ಹಾಗೂ ಜೀವ ಸಂಕುಲ ನಾಶಗೊಂಡಿದೆ.
ಮೇಲಿಂದ ಮೇಲೆ ಅಗ್ನಿಯ ಅವಘಡಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಇದೀಗ ಡ್ರೋನ್ ಮೊರೆ ಹೋಗಿದೆ. ಹೌದು ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರವಾಸಿಗರು ಹಾಗೂ ಸ್ಥಳೀಯರ ಮೇಲೆ ಡೋನ್ ಕ್ಯಾಮೆರಾ ಹದ್ದಿನ ಕಣ್ಣಿಟ್ಟಿದೆ.
ಬೆಂಕಿ ಹಾಕುತ್ತಿರುವವರು ಸ್ಥಳೀಯರು ಅಥವಾ ಪ್ರವಾಸಿಗರಿಂದ ಬೆಂಕಿ ಕಾಣಿಸಿಕೊಳ್ಳುತ್ತಿದೆಯೋ ಅಥವಾ ಆಕಸ್ಮಿಕ ಬೆಂಕಿ ಅನ್ನೋದನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ಮುಂದಾಗಿದೆ. ಗುಡ್ಡಗಾಡು ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡರೆ ನಂದಿಸುವುದು ಬಹಳ ಕಷ್ಟದ ಕೆಲಸ ಹೀಗಾಗಿ, ಕಾಡಿನ ರಕ್ಷಣೆಗೆ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…