ಕೊಡಗು

ಮಕ್ಕಳು ಈಗಿನಿಂದಲೇ ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಡಾ.ಲವೀನ್ ಚೆಂಗಪ್ಪ ಸಲಹೆ

ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು.  ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ ಸಂಸ್ಥೆಯ ವಲಯ ಅಧಿಕಾರಿ ಡಾ. ಲವೀನ್ ಚೆಂಗಪ್ಪ  ಹೇಳಿದರು.

ಸಾಧೀಕ್ ಆರ್ಟ್ ಲಿಂಕ್ಸ್ ವಿರಾಜಪೇಟೆ ಮತ್ತು ರೋಟರಿ ಕ್ಲಬ್ ವಿರಾಜಪೇಟೆ ಶಾಖೆಯ ವತಿಯಿಂದ ರೋಟರಿ ಕ್ಲಬ್‌ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿ ಕಲಾ ಉತ್ಸವ ೨೦೨೪ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಒಂದು ದಿನ ದೇಶ ಭಕ್ತಿ ಬಿಂಬಿಸುವ ಚಿತ್ರ ಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸತತ ಹೋರಾಟದ ಫಲವಾಗಿ ನಮಗೆ ಸ್ವತಂತ್ರ ಲಭಿಸಿದೆ. ಕಿರು ಪ್ರಾಯದ ಮಕ್ಕಳು ಸ್ವತಂತ್ರ ಭಾರತದ ಹೋರಾಟ, ಮಹನೀಯರ ತ್ಯಾಗ ಬಲಿದಾನಗಳ ಕರಾಳ ಚರಿತ್ರೆಯ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಮಕ್ಕಳು ಈಗಿನಿಂದಲೇ ದೇಶ ಭಕ್ತಿ ಮೈಗೂಡಿಸಿಕೊಂಡು ಜಾಗೃತ ಭಾರತ ನಿರ್ಮಾಣ ಕ್ಕೆ ಮಕ್ಕಳು ಮುಂದಾಗಬೇಕು. ಸದೃಡ ಭಾರತದ ಕನಸು ನನಸಾಗಬೇಕು ಎಂದರು.

ರೋಟರಿ ಕ್ಲಬ್ ವಿರಾಜಪೇಟೆ ಅದ್ಯಕ್ಷರಾದ ಪ್ರಣವ್ ಚಿತ್ರಭಾನು ಮಾತನಾಡಿ, ನಾಡು ನನ್ನದು ದೇಶ ನನ್ನದು ಎಂಬ ಭಾವರ್ಥ ನಮ್ಮ ಧ್ಯೇಯ ವಾಕ್ಯವಾಗಬೇಕು. ಬಾಲ್ಯದಿಂದಲೇ ಸ್ವತಂತ್ರ ಭಾರತ ವೀರ ಚರಿತ್ರೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರಕಲಾವಿದರಾದ ಸಾಧೀಕ್ ಅವರೊಂದಿಗೆ ಬೆರೆತು ಕಾರ್ಯಕ್ರಮ ಅಯೋಜಿಸಲಾಗಿದೆ. ದೇಶ ಭಕ್ತಿ ಪರಿಕಲ್ಪನೆ ಎಲ್ಲಾ ವಿದ್ಯಾರ್ಥಿಯಲ್ಲಿ ಜಾಗೃತವಾಗಲಿ ಎಂದು ಹೇಳಿದರು.

ಚಿತ್ರಕಲಾ ಶಿಬಿರದಲ್ಲಿ ನಾಪೊಕ್ಲು, ಮೂರ್ನಾಡು,ಸಿದ್ದಾಪುರ,ಅಮ್ಮತ್ತಿ,ಪಾಲಿಬೆಟ್ಟ, ಗೋಣಿಕೊಪ್ಪಲು ಮತ್ತು ವಿರಾಜಪೇಟೆ ನಗರದ ವಿವಿಧ ಶಾಲೆಗಳ ಸುಮಾರು 95 ವಿದ್ಯಾರ್ಥಿಗಳು ಚಿತ್ರಕಲಾ ಶಿಭಿರದಲ್ಲಿ ಭಾಗವಹಿಸಿದ್ದರು. ೦೧ ರಿಂದ ೦೨ನೇ ತರಗತಿ, ೦೩ ರಿಂದ ೦೪ ನೇ ತರಗತಿ,೦೫ ರಿಂದ ೦೭ ನೇ ತರಗತಿ,ಮತ್ತು ೦೮ ರಿಂದ ೧೦ ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸ್ಪರ್ಧೆಗಳನ್ನು ಎರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ದ್ವೀತಿಯ, ಮತ್ತು ತೃತೀಯ ಎಂದು ಪಾರಿತೋಷಕಗಳನ್ನು ನೀಡಲಾಯಿತು.

ರೋಟರಿ ಕ್ಲಬ್ ವಿರಾಜಪೇಟೆಯ ಹಿರಿಯ ಸದಸ್ಯರಾದ ಸುದರ್ಶನ್ ರೈ ,ಸಂಸ್ಥೆಯ ಉಪ ಅದ್ಯಕ್ಷರಾದ ಕೆ.ಹೆಚ್ ಆದಿತ್ಯ, ಕಾರ್ಯಕ್ರಮ ಅಯೋಜಕರಾದ ಸಾಧೀಕ್ ಹಂಸ ಮತ್ತು ತಾಂತ್ರಿಕ ಸದಸ್ಯರು, ರೋಟರಿ ಕ್ಲಬ್ ನ ಸದಸ್ಯರು ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago