ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ.
ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು ಜ್ಯೋತಿ ಬೆಳಗಿ ಸ್ವಾಗತಿಸಿದರು.
ಭಾಗಮಂಡಲದ ಕಾವೇರಿ ಕಾಲೇಜು ಮೈದಾನಕ್ಕೆ ಬಂದಿಳಿದ ಡಿಕೆಶಿಯನ್ನು ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ ಅವರು ಬರಮಾಡಿಕೊಂಡರು. ಈ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಕೊಡಗು ಜಿಲ್ಲಾಧಿಕಾರಿ ಸೋಮಶೇಖರ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಎಸ್ ಪಿ ಬಿಂದುಮಣಿ ಸೇರಿದಂತೆ ವಿವಿಧ ಅಧಿಕಾರಿಗಳಿಂದ ಹಾಜರಿದ್ದರು.
ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಅವರು ಪೊಲೀಸ್ ಇಲಾಖೆಯ ಗೌರವ ವಂದನೆ ಸ್ವೀಕರಿಸಿದರು.




