Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಲೈನ್‌ಮನೆಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದವರಿಗೆ ನಿವೇಶನ ಹಕ್ಕುಪತ್ರ ವಿತರಿಸುವುದರ ಜೊತೆಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಲೈನ್‌ಮನೆಗಳಲ್ಲಿ ವಾಸಿಸುವ ನಿವೇಶನ ರಹಿತ ಕುಟುಂಬದವರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಆದರೂ ಸಹ ಕೆಲವು ಕುಟುಂಬದವರ ಸಮರ್ಪಕ ಮಾಹಿತಿ ಲಭ್ಯ ಇಲ್ಲದಿರುವ ಹಿನ್ನೆಲೆ ಸಂಬಂಧಪಟ್ಟ ಗ್ರಾಮಕ್ಕೆ ತೆರಳಿ ಆಧಾರ್ ಕಾರ್ಡ್ ಮಾಡಿಸುವುದು ಹಾಗೆಯೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರು.

Tags:
error: Content is protected !!